
ಮಹಾಜನ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕರಾದ ಖಂಡಿಗೆ ಶಾಮ ಭಟ್, ಮಹಾಜನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್, ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
ಶಾಲಾ ನಿವೃತ್ತ ಅಧ್ಯಾಪಕ ದಿ.ಪಡಿಯಡ್ಪು ಮಹಾಲಿಂಗ ಭಟ್ ಅವರ ತೈಲ ಭಾವಚಿತ್ರವನ್ನು ಖಂಡಿಗೆ ಶಾಮ ಭಟ್ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಪೂರ್ವ ವಿದ್ಯಾರ್ಥಿಗಳಾಗಿದ್ದು ಕಣ್ಣೂರು ವಿಶ್ವವಿದ್ಯಾನಿಲ ನಡೆಸಿದ ಕನ್ನಡ ಬಿ.ಎ. ಪರೀಕ್ಷೆಯಲ್ಲಿ ಪ್ರಥಮ ರೇಂಕ್ ಗಳಿಸಿದ ಸೌಮ್ಯಾ. ಕೆ ಮತ್ತು ತೃತೀಯ ರೇಂಕ್ ಗಳಿಸಿದ ಸೌಮ್ಯಾ. ಪಿ. ಇವರನ್ನು ಸನ್ಮಾನಿಸಲಾಯಿತು.
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವಿಕೃಷ್ಣ. ಯು ವರದಿ ವಾಚಿಸಿದರು. ಶಾಲಾ ಹಿರಿಯ ಅಧ್ಯಾಪಕ ಎಸ್.ವಿ.ಭಟ್ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಕನ್ನಡ ಅಧ್ಯಾಪಿಕೆ ಎ.ಶೈಲಜಾ ಕಾರ್ಯಕ್ರಮವನ್ನು ನಿರೂಪಿಸಿದರು.