Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

26 June 2009

ಶತಮಾನದ ಹೊಸ್ತಿಲಲ್ಲಿ ಸನ್ನಡತೆಯ ಸಭೆ: ಖಂಡಿಗೆ ಶಾಮ ಭಟ್

“ಕಾಸರಗೋಡಿನ ಇತಿಹಾಸದಲ್ಲಿ ಅಚ್ಚಳಿಯದ ದಾಖಲೆಗಳನ್ನು ನಿರ್ಮಿಸಿದ ಮಹಾಜನ ವಿದ್ಯಾಸಂಸ್ಥೆ ಶತಮಾನದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿಯ ಲಕ್ಷ್ಯವಿರಿಸಿ ನಡೆದ ಸಭೆ ಇಲ್ಲಿನ ಜನ ಸ್ಪಂದನಕ್ಕೆ ಮಾದರಿಯಾಗಿದೆ. ಶತಮಾನದ ಆಚರಣೆಗೆ ಇದು ನಮಗೆ ಸ್ಪೂರ್ತಿ ನೀಡುತ್ತದೆ. ಶಾಲೆ ಮತ್ತು ವಿದ್ಯಾರ್ಥಿಗಳ ಪ್ರಗತಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಪಾತ್ರ ಮಹತ್ತರವಾದದ್ದು" ಎಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ವ್ಯವಸ್ಥಾಪಕ ಖಂಡಿಗೆ ಶ್ಯಾಮ ಭಟ್ ಅಭಿಪ್ರಾಯಪಟ್ಟರು. ಅವರು ದಿನಾಂಕ ೨೫.೦೬.೨೦೦೯ ಗುರುವಾರದಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯಲ್ಲಿ ಜರಗಿದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಮಾರ್ಗದರ್ಶಕರಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ಗೋಪಾಲಕೃಷ್ಣ ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಅಬ್ಬಾಸ್ ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವರದಿ ವಾಚಿಸಿದರು. ಕೆ.ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಹಿರಿಯ ಅಧ್ಯಾಪಕ ಎಸ್.ವಿ.ಭಟ್ ಧನ್ಯವಾದ ಸಮರ್ಪಿಸಿದರು.

No comments:

Post a Comment