"ನಮ್ಮಲ್ಲಿರುವ ಪ್ರತಿಭೆಗಳನ್ನು ಸುಪ್ತವಾಗಿರಿಸಬಾರದು, ಅವುಗಳನ್ನು ಅನಾವರಣಗೊಳಿಸಬೇಕು. ಪ್ರತಿಭೆಯ ಪ್ರಕಟಣೆಗೆ ಭಾಷೆ ತೊಡಕಾಗಬಾರದು. ವಿದ್ಯಾರಂಗ ವೇದಿಕೆಯ ಮೂಲಕ ನಿಮ್ಮ ಪ್ರತಿಭೆ ಇನ್ನಷ್ಟು ವಿಕಾಸಗೊಳ್ಳಲಿ "ಎಂದು ಹಿರಿಯ ಸಂಸ್ಕೃತ ಅಧ್ಯಾಪಕ ಎಸ್.ವಿ.ಭಟ್ ಅಭಿಪ್ರಾಯಪಟ್ಟರು. ಅವರು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯಲ್ಲಿ ೨೬.೦೬.೨೦೦೯ ಶುಕ್ರವಾರದಂದು ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅಧ್ಯಾಪಕಿ ಭುವನೇಶ್ವರಿ ಉಪಸ್ಥಿತರಿದ್ದರು. ಶೃತಿ.ವೈ ಕಳೆದ ಅಧ್ಯಯನ ವರ್ಷದ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ವಿನೀತ್ ಶಂಕರ್.ಎಚ್ ಸ್ವಾಗತಿಸಿ ಸ್ಪೂರ್ತಿ.ಕೆ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಶಾಂತಿ.ಕೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮಗಳು ಜರಗಿದವು.
No comments:
Post a Comment