Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

15 July 2009

ಇಕೋ ಕ್ಲಬ್ ಉದ್ಘಾಟನೆ

“ ನಮ್ಮ ಪರಿಸರವನ್ನು ಯಾವತ್ತೂ ಶುಚಿಯಾಗಿ ಇರಿಸಿಕೊಳ್ಳಬೇಕು. ಆ ಮೂಲಕ ಸ್ವಚ್ಚ ವಾತಾವರಣದ ನಿರ್ಮಾಣವಾಗಬೇಕು. ಶುದ್ಧ ಗಾಳಿ ನಮ್ಮ ಉಸಿರಾಗಬೇಕು. ಆರೋಗ್ಯದ ದೃಷ್ಟಿಯಿಂದ ಮಹಾಮಾರಿಗಳಾದ ಡೆಂಗ್ಯು, ಮಲೇರಿಯಾ, ಹಂದಿ ಜ್ವರದಂತಹ ಖಾಯಿಲೆಗಳನ್ನು ನಾವು ಹೊಡೆದೋಡಿಸಬೇಕು"ಎಂದು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯಲ್ಲಿ ೧೦.೦೭.೨೦೦೯ ಶುಕ್ರವಾರದಂದು ಆರೋಗ್ಯ ಮತ್ತು ಪರಿಸರ ಕ್ಲಬ್ ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಹಿರಿಯ ಅಧ್ಯಾಪಿಕೆ ಎ.ಭುವನೇಶ್ವರಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕರಾದ ಎಂ.ಸೂರ್ಯನಾರಾಯಣ ಸ್ವಾಗತಿಸಿ, ಎಂ.ಕೆ.ಶಿವಪ್ರಕಾಶ್ ವಂದಿಸಿದರು. ವಿದ್ಯಾರ್ಥಿ ಅನುತೇಜ್ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment