Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

14 August 2009

ಲೋಕಕಲ್ಯಾಣಕ್ಕಾಗಿ ಕೃಷ್ಣಾವತಾರ: ಸಿ.ಎಚ್.ರಾಮ ಭಟ್


“ಅಧರ್ಮದ ಮೇರೆ ಮೀರಿದಾಗ ಅವತಾರವೆತ್ತಿದ ಕೃಷ್ಣ ಪರಮಾತ್ಮನು ಧರ್ಮದ ಪುನಸ್ಥಾಪನೆ ಮಾಡಿದನು. ಸತ್ಯ, ಧರ್ಮದಿಂದ ಬಾಳಿ ಬದುಕುವ ಜನರ ಏಳಿಗೆಗಾಗಿ ಶ್ರಮಿಸಿದನು. ದೇವತಾರಾಧನೆ ಮತ್ತು ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತವೆ. ವಿದ್ಯಾಲಯಗಳಲ್ಲಿ ಅಂತಹ ಧಾರ್ಮಿಕ ಮೌಲ್ಯದ ದಿನಗಳನ್ನು ಆಚರಿಸುವುದು ಸ್ತುತ್ಯರ್ಹವಾಗಿದೆ" ಎಂದು ಕಾಸರಗೋಡು ಸರಕಾರಿ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಸಿ.ಎಚ್.ರಾಮ ಭಟ್ ಹೇಳಿದರು. ಅವರು ೧೩.೦೮.೨೦೦೯ ಗುರುವಾರ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಖಂಡಿಗೆ ಶಾಮ ಭಟ್ ಮುಖ್ಯ ಅತಿಥಿಗಳಾಗಿದ್ದರು. ಶಾಲಾ ವಿದ್ಯಾರ್ಥಿ ಮುಖಂಡ ಪ್ರವೀಣ್ ಕುಮಾರ್ ವರದಿ ವಾಚಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ರವಿಕೃಷ್ಣ. ಯು ಸ್ವಾಗತಿಸಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮನರಂಜನಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ‘ಶ್ರೀಕೃಷ್ಣ ಲೀಲೆ’ ಎಂಬ ಯಕ್ಷಗಾನ ಬಯಲಾಟ ಜರಗಿತು. ವಿದ್ಯಾರ್ಥಿಗಳಾದ ನವನೀತ ಕೃಷ್ಣ.ಯು, ವಿಜೇಶ.ಬಿ, ಅನೀಶ್, ವಿನೀತ್ ಶಂಕರ್.ಎಚ್, ಪ್ರವೀಣ್ ಕುಮಾರ, ಅವಿನಾಶ್, ಅಭಿಲಾಷ್, ರಾಮ ನಾಯ್ಕ, ಶಂಕರ ತೇಜಸ್ವಿ, ಯಜ್ಞೇಶ.ಎಂ, ವಿನಾಯಕ.ಎಂ, ಮಂಜುನಾಥ, ಮನೀಶ್.ಬಿ, ಶಬರೀಶ ಪಾತ್ರವರ್ಗದಲ್ಲಿ ಮಿಂಚಿದರು. ಸುರೇಶ ಆಚಾರ್ಯ ನೀರ್ಚಾಲ್ ಮತ್ತು ಉಂಡೆಮನೆ ಕೃಷ್ಣ ಭಟ್ ಭಾಗವತರಾಗಿ ಸಹಕರಿಸಿದರು. ಬಾಲಕೃಷ್ಣ ಆಚೆಗೋಳಿ, ಈಶ್ವರ ಮಲ್ಲ, ಪ್ರಕಾಶ ನೀರ್ಚಾಲು ಮತ್ತು ಭಾಸ್ಕರ ಕಲ್ಲಕಟ್ಟ ಹಿಮ್ಮೇಳದಲ್ಲಿ ಸಹಕರಿಸಿದರು. ದಿವಾಣ ಶಿವಶಂಕರ ಭಟ್ ನಿರ್ದೇಶಿಸಿದರು, ದೇವಕಾನ ಕೃಷ್ಣ ಭಟ್ ವಸ್ತ್ರಾಲಂಕಾರದಲ್ಲಿ ಸಹಕರಿಸಿದರು.

No comments:

Post a Comment