Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

15 August 2009

ನೀರ್ಚಾಲಿನಲ್ಲಿ ಸ್ವಾತಂತ್ರ್ಯೋತ್ಸವ

“ಮಹಾಪುರುಷರ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ೬೩ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ನಾವು ಆ ಮಹಾನ್ ತ್ಯಾಗಿಗಳ ಬಲಿದಾನವನ್ನು ನೆನಪಿಸಿಕೊಳ್ಳಬೇಕು. ಬಡವರ ಸೇವೆ, ಪರೋಪಕಾರ, ಅಹಿಂಸೆ, ಸತ್ಯ, ಶಾಂತಿ ನಮ್ಮ ಮಂತ್ರವಾಗಬೇಕು. ಆ ಮೂಲಕ ನಮ್ಮ ದೇಶದ ಉದ್ಧಾರ ಆಗಬೇಕು" ಎಂದು ನಿವೃತ್ತ ಮುಖ್ಯೋಪಾಧ್ಯಾಯ ಕಾನ ಈಶ್ವರ ಭಟ್ ಹೇಳಿದರು. ಅವರು ೧೫.೦೮.೨೦೦೯ ಶನಿವಾರ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಶುಭ ಹಾರೈಸಿದರು. ಕೆ.ನಾರಾಯಣ ಭಟ್, ಎಂ.ಸೂರ್ಯನಾರಾಯಣ, ಪ್ರವೀಣ್ ಕುಮಾರ್, ಅವಿತೇಶ್.ಬಿ, ಕೀರ್ತಿ. ಬಿ ಮತ್ತು ಶ್ರೀಶ.ಕೆ ಸ್ವಾತಂತ್ರ್ಯ ದಿನದ ಮಹತ್ವ ಕುರಿತು ಮಾತನಾಡಿದರು. ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿದರು. ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮುಖ್ಯೋಪಾಧ್ಯಾಯ ರವಿಕೃಷ್ಣ.ಯು ವಂದಿಸಿದರು. ಕಾರ್ಯಕ್ರಮ ಸಂಚಾಲಕ, ಶಾಲಾ ಅಧ್ಯಾಪಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ‘ಸ್ವಾತಂತ್ರ್ಯದ ಸ್ಮೃತಿ’ ಹಸ್ತಪ್ರತಿ ಬಿಡುಗಡೆಗೊಳಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಉಪ್ಪಿನ ಸತ್ಯಾಗ್ರಹದ ಕುರಿತಾದ ಪ್ರಾತ್ಯಕ್ಷಿಕೆ, ಸ್ವಾತಂತ್ರ್ಯ ರೂಪಕ, ದೇಶಭಕ್ತಿಗೀತೆ, ನೃತ್ಯ ಕಾರ್ಯಕ್ರಮಗಳು ಜರಗಿದವು.

No comments:

Post a Comment