ಕಾಸರಗೋಡು ಜಿಲ್ಲಾ ಮಟ್ಟದ ಥ್ರೋ ಬಾಲ್ ಸ್ಪರ್ಧೆಯ ಹುಡುಗರ ಮತ್ತು ಹುಡುಗಿಯರ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಬಂದಿದ್ದೇವೆ.
30 September 2009
28 September 2009
ಸರಸ್ವತೀ ನಮಸ್ತುಭ್ಯಂ...
26 September 2009
ಜಿಲ್ಲಾ ಸ್ವತಂತ್ರ ಸಾಫ್ಟ್ವೇರ್ ಪ್ರಬಂಧ ಸ್ಪರ್ಧೆ - ಶಾಂತಿ.ಕೆ ಪ್ರಥಮ
ಸ್ವತಂತ್ರ ಸಾಫ್ಟ್ವೇರ್ ದಿನಾಚರಣೆಯ ಅಂಗವಾಗಿ ಕಾಸರಗೋಡು ಜಿಲ್ಲಾ ಐಟಿ ಸ್ಕೂಲ್ ಆಶ್ರಯದಲ್ಲಿ ೨೪.೦೯.೨೦೦೯ ಗುರುವಾರ ಕಾಸರಗೋಡಿನಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಶಾಂತಿ.ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈಕೆ ಎಡನೀರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಕೆ. ಗಣೇಶ್ ಭಟ್ ಇವರ ಪುತ್ರಿ. ಕಾಸರಗೋಡು ನಗರಸಭಾ ಅಧ್ಯಕ್ಷೆ ಬೀಫಾತಿಮಾ ಇಬ್ರಾಹಿಂ ಪ್ರಶಸ್ತಿ ವಿತರಿಸಿದರು.
24 September 2009
23 September 2009
ಶಟಲ್ ಬ್ಯಾಡ್ಮಿಂಟನ್ - ಪ್ರಶಸ್ತಿ
22 September 2009
ದಟ್ಸ್ ಕನ್ನಡದಲ್ಲಿ ನಮ್ಮ ಶಾಲೆ
ದಟ್ಸ್ ಕನ್ನಡದ ಪರಿಚಯ ನಿಮಗೆಲ್ಲ ಇರಬಹುದು. ನಮ್ಮ ಬ್ಲಾಗ್ ಓದಿ ದಟ್ಸ್ ಕನ್ನಡದ ಸಂಪಾದಕ ಶ್ಯಾಮ್ ಸುಂದರ್ ಶಾಲೆಯ ಬಗ್ಗೆ ಪರಿಚಯ ಲೇಖನವನ್ನು ಕೇಳಿದ್ದರು ಮತ್ತು ಸಕಾಲದಲ್ಲಿ ಆ ಲೇಖನವನ್ನು ಪ್ರಕಟಿಸಿದ್ದರು. ಧನ್ಯವಾದಗಳು ಅವರಿಗೆ... ನಿಮ್ಮೆಲ್ಲರ ಓದಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ. http://thatskannada.oneindia.in/literature/my-karnataka/2009/0910-neerchalu-mahajan-sanskrit-college-kasargod.html
18 September 2009
17 September 2009
ಬಯಲು ಪ್ರವಾಸ
16 September 2009
ಶಾಲಾ ಸಂದರ್ಶನ
ಸನ್ಮಾನ್ಯ ಜಿಲ್ಲಾ ವಿದ್ಯಾಧಿಕಾರಿಗಳಾದ ಶ್ರೀ ಎನ್. ಕೆ. ಮೋಹನದಾಸ್ ಇಂದು ನಮ್ಮ ಶಾಲಾ ಸಂದರ್ಶನದಲ್ಲಿದ್ದಾರೆ. ನಮ್ಮ ಬೆಳವಣಿಗೆಗಾಗಿ ಇನ್ನಷ್ಟು ಸಲಹೆಗಳನ್ನೂ ನೀಡಿದ್ದಾರೆ. ಧನ್ಯವಾದಗಳು... ಅವರಿಗೂ, ಅವರ ತಂಡಕ್ಕೂ...
14 September 2009
ಕ್ರೀಡಾ ವಿಶೇಷಾಂಕ ಬಿಡುಗಡೆ
10 September 2009
09 September 2009
“ಯಕ್ಷಗಾನ ಗಂಡುಕಲೆ”:- ಮಾಧವ ತಲ್ಪಣಾಜೆ
“ಕರಾವಳಿ ಮಲೆನಾಡಿನ ಗಂಡುಕಲೆ ಯಕ್ಷಗಾನವು ಕಲಾಲೋಕಕ್ಕೆ ನೀಡಿದ ಸಂಭಾವನೆ ಅನನ್ಯವಾದುದು, ಈ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು” ಎಂದು ಯಕ್ಷಗಾನ ಕಲಾವಿದ ಮಾಧವ ತಲ್ಪಣಾಜೆ ಅಭಿಪ್ರಾಯಪಟ್ಟರು. ಅವರು ೦೮.೦೯.೨೦೦೯ ಮಂಗಳವಾರ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಗೋವಿಂದ ಭಟ್.ಪಿ ಅಧ್ಯಕ್ಷತೆ ವಹಿಸಿದ್ದರು. ನಾಲ್ಕನೇ ತರಗತಿ ವಿದ್ಯಾರ್ಥಿಗಳು ಯಕ್ಷಗಾನ ಕುರಿತಾದ ಸಂವಾದ ನಡೆಸಿದರು. ಶಿಕ್ಷಕಿ ಮಾಲತಿ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಸಂದೇಶ ರೈ ವಂದಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಗೋವಿಂದ ಭಟ್.ಪಿ ಅಧ್ಯಕ್ಷತೆ ವಹಿಸಿದ್ದರು. ನಾಲ್ಕನೇ ತರಗತಿ ವಿದ್ಯಾರ್ಥಿಗಳು ಯಕ್ಷಗಾನ ಕುರಿತಾದ ಸಂವಾದ ನಡೆಸಿದರು. ಶಿಕ್ಷಕಿ ಮಾಲತಿ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಸಂದೇಶ ರೈ ವಂದಿಸಿದರು.
07 September 2009
ಸುಧಾ ಪತ್ರಿಕೆಗೆ ನಮ್ಮ ನಮನಗಳು
ನೀರ್ಚಾಲಿನಲ್ಲಿ ಶಿಕ್ಷಕರ ದಿನಾಚರಣೆ
“ಅಧ್ಯಾಪಕರ ಕರ್ತವ್ಯ ಪ್ರಜ್ಞೆಯನ್ನು ಜಾಗೃತಗೊಳಿಸಿ, ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿ ಜನಸಾಮಾನ್ಯರ ಮನದಲ್ಲೂ ಅಚ್ಚಳಿಯದ ನೆನಪು ಉಳಿಸಿದ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ನಾವು ಇಂದು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿದ್ದೇವೆ. ವಿದ್ಯಾರ್ಥಿಗಳಿಗೆ ಸೂಕ್ತ ಕಿವಿ ಮಾತುಗಳನ್ನು ಹೇಳಿ ಅವರನ್ನು ತಿದ್ದಿ ತೀಡುವ ಅಧ್ಯಾಪಕರಿಗೆ ಗೌರವ ಸಲ್ಲಿಸುವುದು ನಾಳಿನ ಸತ್ಪ್ರಜೆಗಳನ್ನು ರೂಪಿಸುವ ನಿಟ್ಟಿನಲ್ಲಿ ಉಪಯುಕ್ತವಾಗಿದೆ" ಎಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ದಿನಾಂಕ ೦೭.೦೯.೨೦೦೯ ಸೋಮವಾರದಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜರಗಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಎಂ.ವಿ.ಗೋಪಾಲಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್, ಹಿರಿಯ ಅಧ್ಯಾಪಕರಾದ ಕನ್ನೆಪ್ಪಾಡಿ ನಾರಾಯಣ ಭಟ್, ಭುವನೇಶ್ವರಿ ಹಾಗೂ ವಿದ್ಯಾರ್ಥಿಗಳ ಪರವಾಗಿ ಅವಿತೇಶ್.ಬಿ ಶುಭಾಶಯಗಳನ್ನು ಸಮರ್ಪಿಸಿದರು. ವಿದ್ಯಾರ್ಥಿಗಳಾದ ಮುರಳಿಕೃಷ್ಣ ಶರ್ಮ ಸ್ವಾಗತಿಸಿ ಲತಾಶಂಕರಿ.ಕೆ ವಂದಿಸಿದರು. ಚೈತ್ರಾ. ಟಿ. ಎಸ್ ಕಾರ್ಯಕ್ರಮ ನಿರೂಪಿಸಿದರು. ಜೀವನ್ ಕುಮಾರ್ ಪ್ರಾರ್ಥಿಸಿದರು.
ನಿವೃತ್ತ ಮುಖ್ಯೋಪಾಧ್ಯಾಯ ಎಂ.ವಿ.ಗೋಪಾಲಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್, ಹಿರಿಯ ಅಧ್ಯಾಪಕರಾದ ಕನ್ನೆಪ್ಪಾಡಿ ನಾರಾಯಣ ಭಟ್, ಭುವನೇಶ್ವರಿ ಹಾಗೂ ವಿದ್ಯಾರ್ಥಿಗಳ ಪರವಾಗಿ ಅವಿತೇಶ್.ಬಿ ಶುಭಾಶಯಗಳನ್ನು ಸಮರ್ಪಿಸಿದರು. ವಿದ್ಯಾರ್ಥಿಗಳಾದ ಮುರಳಿಕೃಷ್ಣ ಶರ್ಮ ಸ್ವಾಗತಿಸಿ ಲತಾಶಂಕರಿ.ಕೆ ವಂದಿಸಿದರು. ಚೈತ್ರಾ. ಟಿ. ಎಸ್ ಕಾರ್ಯಕ್ರಮ ನಿರೂಪಿಸಿದರು. ಜೀವನ್ ಕುಮಾರ್ ಪ್ರಾರ್ಥಿಸಿದರು.
Subscribe to:
Posts (Atom)