Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

19 October 2009

.... ಅಶ್ರುತರ್ಪಣ

ಕ್ಷಮೆ ಇರಲಿ, ಬೇವು ಚಿಗುರೊಡೆದ ಸಂತಸದ ಸುದ್ದಿಯ ಹಿಂದೆ, ಬೆಳೆಯುತ್ತಿರುವ ನಾಲ್ಕು ಚಿಗುರುಗಳು ಮುರುಟಿಹೋದ ಸುದ್ದಿ ಬರೆಯಲು ದುಃಖದ ಕಟ್ಟೆ ಸಮ್ಮತಿಸುವುದಿಲ್ಲ. ನಿಮ್ಮ ಮುಂದೆ ಇಡುವ ವಿಚಾರ ಮೌನ ಮಾತ್ರ.... ಮೊನ್ನೆ ನರಕ ಚತುರ್ದಶಿಯ ಹಬ್ಬದ ದಿನ, ೧೭.೧೦.೨೦೦೯ ಶನಿವಾರ ಕಲ್ಲಕಟ್ಟ ಸಮೀಪದ ಬಾರಿಕ್ಕಾಡು, ಅಜ್ಜಾವರ ಕ್ಷೇತ್ರದ ಬಳಿಯಲ್ಲಿ ಹರಿಯುವ ಮಧುವಾಹಿನಿ ನದಿಯಲ್ಲಿ ಸ್ನಾನಕ್ಕಿಳಿದ ನಮ್ಮ ಶಾಲೆಯ ವಿದ್ಯಾರ್ಥಿಗಳಾದ ಅಭಿಲಾಶ್, ರತನ್ ಕುಮಾರ್ ಮತ್ತು ಅಜಿತ್ ಹಾಗೂ ಕಳೆದ ವರ್ಷ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅಜೀಶ್ ಹೀಗೆ... ನಾಲ್ವರು ವಿದ್ಯಾರ್ಥಿಗಳು ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾರೆ. ಆಸ್ಪತ್ರೆಗೆ ತಲಪುವ ಮುನ್ನವೇ ಅಸುನೀಗಿದ ಈ ನಾಲ್ವರು ಬಾಲಕರ ಆತ್ಮಕ್ಕೆ ಚಿರಶಾಂತಿಯನ್ನು ಮತ್ತು ಅವರ ತಂದೆತಾಯಿ, ಕುಟುಂಬ ಹಾಗೂ ಮಿತ್ರವರ್ಗಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಪರಮಾತ್ಮನು ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುತ್ತೇವೆ.

3 comments:

  1. ನಿಜಕ್ಕೂ ದುಖಃದ ವಿಚಾರ. ತಂದೆ ತಾಯಿಯರ ಕುರಿತು ಯೋಚಿಸಲೇ ಭಯವಾಗುತ್ತದೆ. ಕಾಲವೇ ನೋವು ಮರೆಸಬೇಕು. ಇನ್ನೆಂತ ಹೇಳಲಿ?

    ReplyDelete
  2. ಎಳೆಯ ಮಕ್ಕಳು ದುರಂತಕ್ಕೀಡಾದ ಸುದ್ದಿ ತಿಳಿದು ದುಃಖವಾಯಿತು.

    ReplyDelete
  3. ಬೇಸರದ ವಿಷಯ.
    ಮಕ್ಕಳ ಆತ್ಮಕ್ಕೆ ಚಿರ ಶಾಂತಿ ಕೊಡಲಿ ಎಂದು ಹಾರಯಿಕೆ.

    ReplyDelete