Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

23 October 2009

ಕೊನೆಯ ಚಿತ್ರ...

ಮೊನ್ನೆ ಅಸುನೀಗಿದ ನಾಲ್ವರು ಬಾಲಕರಲ್ಲಿ ಕಿರಿಯವನಾದ ಅಜಿತ್ ಬಿ.ಟಿ ಬಿಡಿಸಿದ ಚಿತ್ರ ಇದು. ಈಗ ನಿಮ್ಮ ಮುಂದೆ ಇದೆ. ಇದು ಆ ಹುಡುಗ ಬಿಡಿಸಿದ ಕೊನೆಯ ಚಿತ್ರ. ಗುರುವಾರ ಶಾಲೆಯಲ್ಲಿ ಜರಗಿದ ಕಲೋತ್ಸವ ಸ್ಪರ್ಧೆಗಳಲ್ಲಿ ಆಸಕ್ತಿಯಿಂದ ಭಾಗವಹಿಸಿ ಬಿಡಿಸಿದ ಪೆನ್ಸಿಲ್ ಡ್ರಾಯಿಂಗ್ ಇದು. ಶುಕ್ರವಾರ ಶಾಲಾ ಕ್ರೀಡಾಕೂಟ ಜರಗಿತ್ತು. ಈತ ಮತ್ತು ಅಣ್ಣಂದಿರು ಆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಶನಿವಾರ ದೇವರು ಬಿಡಿಸಿದ ಆ ನಾಲ್ಕು ಪುಟಾಣಿಗಳ ಚಿತ್ರವನ್ನು ಯಮ ಬಲಿ ತೆಗೆದುಕೊಂಡ...
ಅತ್ಯಂತ ಬಡ ಕುಟುಂಬದ ಈ ಬಾಲಕರ ಪೈಕಿ ಇನ್ನುಳಿದವರಿಗೆ ಆಶ್ರಯ ನೀಡುವುದು ಸಮಾಜದ ಕರ್ತವ್ಯ ಎನ್ನುವ ದೃಷ್ಟಿಯಿಂದ ಕುಟುಂಬ ಸಹಾಯ ನಿಧಿಯನ್ನು ಸ್ಥಾಪಿಸಿದ್ದೇವೆ. ಇದಕ್ಕಾಗಿ ಹಳೆ ವಿದ್ಯಾರ್ಥಿಗಳ, ರಕ್ಷಕ ಶಿಕ್ಷಕ ಸಂಘದ ಸಹಾಯ ಸಮಿತಿಯನ್ನೂ ರೂಪೀಕರಿಸಲಾಗಿದೆ. ಅಜಿತ್ ಕುಟುಂಬದಲ್ಲಿ ತಾಯಿ ತಂದೆಯರ ಹೊರತಾಗಿ ಉಳಿದಿರುವುದು ಮಾನಸಿಕ ವಿಕಲ ಚೇತನೆ ತಂಗಿ ಮಾತ್ರ....
ಆಸಕ್ತರು ನೀರ್ಚಾಲು ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ತೆರೆಯಲಾದ ಚಾಲ್ತಿ ಖಾತೆ ಸಂಖ್ಯೆ ೭೧೬೦ಕ್ಕೆ ದೇಣಿಗೆ ಸಲ್ಲಿಸಬೇಕಾಗಿ ಅಪೇಕ್ಷೆ.

1 comment:

  1. hlavu dinagala nantara blog teredege dukada vishaya kandu besarvaitu.

    ReplyDelete