
26 February 2010
ಸಾಬೂನು ತಯಾರಿ

23 February 2010
22 February 2010
ಶುಭಾಶಯಗಳು ರವಿಪ್ರಕಾಶ್ ಈಂದುಗುಳಿ...

18 February 2010
ಪರೀಕ್ಷೆಗಳೆಲ್ಲ ಕಾಯುತ್ತಿವೆ...
10 February 2010
ಜಲಸಿರಿ 2010

08 February 2010
ಶಾಲಾ ವಾರ್ಷಿಕೋತ್ಸವ

ಕೇರಳ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ರಮೇಶ ಮತ್ತು ತೊಂಭತ್ತು ವರ್ಷಗಳನ್ನು ಪೂರೈಸಿದ ಮಹಾಜನ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕರಾದ ಖಂಡಿಗೆ ಶ್ಯಾಮ ಭಟ್ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಎಂ.ಅಬ್ಬಾಸ್ ಶುಭಾಶಂಸನೆಗೈದರು.
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವಿಕೃಷ್ಣ. ಯು ವರದಿ ವಾಚಿಸಿದರು. ಶಾಲಾ ಹಿರಿಯ ಅಧ್ಯಾಪಕ ಎಸ್. ವಿ. ಭಟ್ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಶಾರೀರಿಕ ಶಿಕ್ಷಣ ಅಧ್ಯಾಪಕ ಎಂ.ಸೂರ್ಯನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು. ಮಹಾಜನ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆಯನ್ನೂ ಏರ್ಪಡಿಸಲಾಗಿತ್ತು.
05 February 2010
ನಾಳೆ ಶಾಲಾ ವಾರ್ಷಿಕೋತ್ಸವ, ಬನ್ನಿ...
ಸಂಪ್ರದಾಯದಂತೆ ನಾಳೆ ಹಗಲು ಶಾಲಾ ವಾರ್ಷಿಕೋತ್ಸವ ರಂಗಮಂದಿರದಲ್ಲಿ ನಡೆಯಲಿದೆ. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಶಂಕರಮೋಹನದಾಸ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ವಿಜೇತ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೆ.ರಮೇಶ ಮತ್ತು ಶಾಲಾ ವ್ಯವಸ್ಥಾಪಕರೂ ಹಿರಿಯರೂ ಆದ ಖಂಡಿಗೆ ಶಾಮ ಭಟ್ಟರು ತೊಂಭತ್ತು ವರ್ಷಗಳನ್ನು ಪೂರೈಸಿರುವುದನ್ನು ಜೊತೆಯಾಗಿ ಗೌರವಿಸುವುದರ ಮೂಲಕ ಆಚರಿಸಲಿದ್ದೇವೆ. ಇಂದು ಸಾಯಂಕಾಲ ನಾಲ್ಕು ಘಂಟೆಗೆ ಮಹಾಜನ ಹಳೆವಿದ್ಯಾರ್ಥಿ ಸಂಘದ ಮಹಾಸಭೆ ಜರಗಲಿದೆ. ಪ್ರೀತಿಯಿಟ್ಟು ಬನ್ನಿ....
03 February 2010
ಪ್ರವಾಸ ಕಥನ - ಚೈತಾಲಿ. ಕೆ.ಎನ್

“ಮಕ್ಕಳೇ ಇಳಿಯಿರಿ" ಎಂದು ಅಧ್ಯಾಪಕರು ಹೇಳಿದಾಗ ಹೊರಬಂದೆವು. “ಓಹ್, ಕೈಮಗ್ಗ ಕಾರ್ಖಾನೆ" ಎಂದು ಉದ್ಗರಿಸಿದೆವು. ಸಾಲಾಗಿ ಆ ಕಟ್ಟಡದ ಒಳಗೆ ಪ್ರವೇಶಿಸಿದೆವು. ಅಲ್ಲಿ ತುಂಬಾ ಜನ ಹೆಂಗಳೆಯರು ಬಣ್ಣದ ನೂಲನ್ನು ತಯಾರಿಸುತ್ತಿದ್ದರು. ಮುಂದೆ ಬಣ್ಣದ ನೂಲುಗಳಿಂದ ಬಟ್ಟೆ ತಯಾರಿ ನಡೆಯುತ್ತಿತ್ತು. ಗಾಂಧಿಯವರನ್ನು ನೆನೆದು ಹೆಮ್ಮೆ ಎನಿಸಿತು. ನಮ್ಮಲ್ಲಿ ಮೂಡಿದ ಪ್ರಶ್ನೆಗಳಿಗೆ ಉತ್ತರ ಪಡೆದು ಹೊರಬಂದೆವು. ಅಲ್ಲಿಂದ ಸರಕಾರಿ ಅಂಧರ ಶಾಲೆಯ ಕಡೆಗೆ ಸಾಗಿದೆವು. ಅಂಧರನ್ನು ಹೀಯಾಳಿಸುವುದಾಗಲೀ ತಮಾಷೆ ಮಾಡುವುದಾಗಲೀ ಮಾಡಬಾರದು ಎಂದು ಅಧ್ಯಾಪಕರು ಎಚ್ಚರಿಸಿದ್ದು ಗಮನದಲ್ಲಿ ಇದ್ದುದರಿಂದ ಗಂಭೀರವಾಗಿ ನಡೆದೆವು. ಅಲ್ಲಿನ ರೀತಿ ನೀತಿಗಳನ್ನು ಆ ಶಾಲೆಯ ಅಧ್ಯಾಪಕರು ತಿಳಿಸಿದರು. ಅಲ್ಲಿನ ವಿದ್ಯಾರ್ಥಿಗಳನ್ನು ಕಂಡು ನಮ್ಮ ಕಣ್ಣಂಚಿನಲ್ಲಿ ನೀರೂಡಿತು. “ದೃಷ್ಟಿದಾನವೇ ಮಹಾದಾನ" ಅಂದುಕೊಂಡೆವು.
ಮುಂದೆ ನಾವು ಪಕ್ಕದಲ್ಲಿದ್ದ ನಾಲ್ಕು ಕಾರ್ಖಾನೆಗಳತ್ತ ನಡೆದೆವು. ಮೊದಲು ಪ್ಲಾಸ್ಟಿಕ್ ಬಾಲ್ ಹಾಗೂ ಕೇನ್ ತಯಾರಾಗುವ ಕಾರ್ಖಾನೆ ನೋಡಿದೆವು. ಅಲ್ಲಿ ಹಳದಿ ಬಣ್ಣದ ಬಾಲ್ ತಯಾರಾಗಿ ಉದುರುತ್ತಿದ್ದವು. ಮತ್ತೊಂದೆಡೆ ಕೇನುಗಳು ತಯಾರಾಗುತ್ತಿದ್ದವು. ನಂತರ ನಾವು ಪಾಲಿಥೀನ್ ಬೇಗ್ ತಯಾರಿಕಾ ಘಟಕದ ಕಡೆಗೆ ಸಾಗಿದೆವು. ಅಲ್ಲಿನ ಉಸಿರುಕಟ್ಟಿಸುವಂತಹ ಹೊಗೆ ನಮ್ಮನ್ನು ಕಂಗೆಡಿಸಿತು. ಆಗ ನಮ್ಮ ಮನದಲ್ಲಿ “ದಿನವೂ ಅಲ್ಲಿ ದುಡಿಯುವ ಕಾರ್ಮಿಕರ ಪಾಡು ಏನು?" ಎಂಬ ಪ್ರಶ್ನೆ ಮೂಡಿತು. ಆಧುನಿಕ ಜಗತ್ತಿನಲ್ಲಿ ಇದೆಲ್ಲಾ ಅನಿವಾರ್ಯ ಎಂದು ಸುಮ್ಮನಾದೆವು. ನಾವು ವಾಹನಗಳ ಬೇಟರಿ ತಯಾರಿಕಾ ಕೇಂದ್ರವನ್ನು ಪ್ರವೇಶಿಸಿದೆವು. ಅಲ್ಲಿನ ಕಾರ್ಮಿಕರು ನಮಗೆ ಅಗತ್ಯ ಮಾಹಿತಿಗಳನ್ನು ನೀಡಿದರು.
ಅನಂತರ ನಾವು ಹತ್ತಿರವೇ ಇದ್ದ ಕಾರವಲ್ ಸಂಜೆ ಪತ್ರಿಕೆಯ ಮುದ್ರಣಾಲಯದೊಳಗೆ ಸಾಗಿದೆವು. ಪತ್ರಿಕೆ ಮುದ್ರಣ ರೀತಿ, ಯಂತ್ರವನ್ನು ನೋಡಿ ನಮಗೆ ರೋಮಾಂಚನವಾಯಿತು. ಆಗತಾನೆ ಮುದ್ರಿಸಿದ ಪತ್ರಿಕೆಯನ್ನು ಅವರು ನಮಗೆ ಉಚಿತವಾಗಿ ವಿತರಿಸಿದರು. ಅಲ್ಲಿಂದ ನಾವು ಅಧ್ಯಾಪಕರ ನಿರ್ದೇಶನದ ಮೇರೆಗೆ ಜಿಲ್ಲಾ ನ್ಯಾಯಾಲಯದತ್ತ ಧಾವಿಸಿದೆವು. ಅಲ್ಲಿ ಒಂದು ವ್ಯಾಜ್ಯದ ತೀರ್ಪು ನಡೆಯುತ್ತಿತ್ತು. ಸಿನಿಮಾಗಳಲ್ಲಿ ಮಾತ್ರ ಕೋರ್ಟ್ ನೋಡಿದ್ದ ನಾವು ಪ್ರಥಮ ಬಾರಿಗೆ ಪ್ರತ್ಯಕ್ಷವಾಗಿ ನ್ಯಾಯಾಲಯವನ್ನು ನೋಡಿದೆವು. ಆಗ ಹಸಿವೆಯಾಗಲಾರಂಭಿಸಿದ್ದರಿಂದ ಮಧೂರು ದೇವಸ್ಥಾನದ ಕಡೆಗೆ ಸಾಗಿದೆವು. ಅಲ್ಲಿ ಭೋಜನ ಪ್ರಸಾದವನ್ನು ಸ್ವೀಕರಿಸಿದೆವು.
ಅಪರಾಹ್ನ ನಮ್ಮ ಬಸ್ಸು ಕಾಸರಗೋಡು ಕಡಲ ಕಿನಾರೆಯತ್ತ ಚಲಿಸಿತು. ತೆರೆಗಳೊಂದಿಗೆ ಆಡುತ್ತಾ ಕಡಲಿನಲ್ಲಿ ಹೆಜ್ಜೆಹಾಕಿದೆವು. ಮುಂದೆ ನಾವು ಲೈಟ್ ಹೌಸ್ ಕಡೆಗೆ ನಡೆದೆವು. ಅದರೊಳಗಿನ ೧೬೧ ಮೆಟ್ಟಿಲನ್ನು ಹತ್ತಿದಾಗ ನನಗೆ ಕೈಕಾಲು ನೋಯಲಾರಂಭಿಸಿತು. ಆದರೂ ಕಬ್ಬಿಣದ ಏಣಿಯನ್ನು ಏರಲು ಕುತೂಹಲದಿಂದ ಉತ್ಸುಕಳಾದೆ. ಅಲ್ಲಿಂದ ಸಮುದ್ರ, ಕಿನಾರೆ, ಹಚ್ಚಹಸಿರು, ಮೊಬೈಲ್ ಟವರುಗಳ ದೃಶ್ಯ ನನ್ನನ್ನು ಆನಂದ ತುಂದಿಲಳಾಗಿಸುತು. ಲೈಟ್ ಹೌಸಿನ ಕಾರ್ಯಗಳನ್ನು ತಿಳಿದು ಸಂದರ್ಶಿಸಿದ ಸ್ಥಳಗಳ ಮೆಲುಕು ಹಾಕುತ್ತಾ ಶಾಲೆಗೆ ಹಿಂತಿರುಗಿದೆವು. ಸೂರ್ಯ ಆಗ ತಾನೇ ಅಸ್ತಮಿಸಲಾರಂಭಿಸಿದ್ದ.
01 February 2010
ಚಿತ್ರ - ಆಶಿತ್ ಕೃಷ್ಣ ಉಪಾಧ್ಯಾಯ
Subscribe to:
Posts (Atom)