Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

04 August 2010

ಆರ್ಟ್ಸ್ ಕ್ಲಬ್ ಉದ್ಘಾಟನೆ

“ಕಲಾಭಿರುಚಿಯನ್ನು ಬೆಳೆಸಿಕೊಳ್ಳದ ಮನಸ್ಸಿನಲ್ಲಿ ವಿಕೃತ ಚಿಂತನೆಗಳು ಹುಟ್ಟಿಕೊಳ್ಳುತ್ತವೆ. ಇಂದಿನ ಯುವಜನಾಂಗದಲ್ಲಿ ಕಲೆಯ ಕಡೆಗಿನ ಆಸಕ್ತಿ ಕಡಿಮೆಯಾಗಿರುವುದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿದೆ. ಸಂಗೀತ,ಚಿತ್ರಕಲೆಗಳ ಕಡೆಗೆ ಆಸಕ್ತಿ ಬೆಳೆದಾಗ ಮನಸ್ಸು ಹಗುರವಾಗುತ್ತದೆ, ಒತ್ತಡ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಕಲಾ ಸಂಘದ ಪ್ರಸಕ್ತಿ ಅಗತ್ಯವಾಗಿದೆ" ಎಂದು ನಿವೃತ್ತ ಚಿತ್ರಕಲಾ ಶಿಕ್ಷಕ, ಸಾಹಿತಿ ಬಾಲ ಮಧುರಕಾನನ ಅಭಿಪ್ರಾಯಪಟ್ಟರು. ಅವರು ೦೩.೦೮.೨೦೧೦ ಮಂಗಳವಾರ ನಮ್ಮ ಆರ್ಟ್ಸ್ ಕ್ಲಬ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಹಿಂದೀ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು. ಶಾಲಾ ಹಿರಿಯ ಶಿಕ್ಷಕ ಎಸ್.ವಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರಕಲಾ ಅಧ್ಯಾಪಕ ಗೋವಿಂದ ಶರ್ಮ ಕೋರಿಕ್ಕಾರು ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ಕ್ಷಮಾದೇವಿ ಸ್ವಾಗತಿಸಿ ಗಿರಿಶಂಕರ.ಕೆ ವಂದಿಸಿದರು. ಶಾಂತಿ.ಕೆ ಕಾರ್ಯಕ್ರಮ ನಿರ್ವಹಿಸಿದರು.

No comments:

Post a Comment