Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

16 August 2010

ಬಾಂಗ್ಲಾ ವಿಭಜನೆಯ ಪ್ರಾತ್ಯಕ್ಷಿಕೆ

“ಆಧುನಿಕತೆಯ ಭರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ, ಕೊರಗುತ್ತಿರುವ ಕೃಷಿ ದೇಶದ ಭವಿಷ್ಯಕ್ಕೆ ಮಾರಕವಾಗಿದೆ. ಭಾರತದ ಸ್ವಾತಂತ್ರ್ಯದ ಹಿಂದೆ ಹಲವು ಮಂದಿ ಧೀರ ಹೋರಾಟಗಾರರ ತ್ಯಾಗ, ಬಲಿದಾನಗಳಿವೆ. ಈ ದಿನವನ್ನು ಆಚರಿಸುವ ಸಂದರ್ಭದಲ್ಲಿ ನಾವು ಅವರನ್ನು ಸ್ಮರಿಸಬೇಕು, ಗೌರವಿಸಬೇಕು" ಎಂದು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಅಭಿಪ್ರಾಯಪಟ್ಟರು. ಅವರು ನಿನ್ನೆ ಜರಗಿದ ಸ್ವಾಂತ್ರ್ಯೋತ್ಸವ ಮತ್ತು ಬಾಂಗ್ಲಾ ವಿಭಜನೆಯ ಪ್ರಾತ್ಯಕ್ಷಿಕೆಯ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಎಂ.ಅಬ್ಬಾಸ್, ಶಾಲಾ ಹಿರಿಯ ಅಧ್ಯಾಪಕ ಕೆ. ನಾರಾಯಣ ಭಟ್ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನ ಸಂದೇಶವನ್ನು ನೀಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು. ಚಿತ್ರಕಲಾ ಅಧ್ಯಾಪಕ ಗೋವಿಂದ ಶರ್ಮಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ರೂಪಕ, ಸಮೂಹಗಾನ, ದೇಶಭಕ್ತಿಗೀತೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

No comments:

Post a Comment