Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

27 August 2010

‘ಗಣಕ ಯಂತ್ರ ಆಧುನಿಕ ಜಗತ್ತಿನ ಅವಿಭಾಜ್ಯ ಅಂಗ’

“ಹಿಂದಿನ ಕಾಲದ ವಿದ್ಯಾಭ್ಯಾಸ ಪದ್ಧತಿಗಿಂತ ಭಿನ್ನವಾಗಿ ಹೊಸ ತಲೆಮಾರಿನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ದೊರೆಯುತ್ತಿದೆ. ಯಾವುದೇ ಕಛೇರಿ ಸಂದರ್ಶಿಸಿದರೂ ಬಹುಪಾಲು ಚಟುವಟಿಕೆಗಳು ಗಣಕ ಯಂತ್ರದ ಮೂಲಕ ಜರಗುತ್ತಿರುವುದನ್ನು ಕಾಣಬಹುದು. ಕಂಪ್ಯೂಟರ್ ಸಾಕ್ಷರತೆಯ ಆವಶ್ಯಕತೆ ಈಗ ಹೆಚ್ಚುತ್ತಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ. ಈಗಿನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ದೊರೆಯುತ್ತಿರುವುದು ಮತ್ತು ಇಂತಹ ಕಾರ್ಯಾಗಾರಗಳ ಮೂಲಕ ಬಳಕೆಯಲ್ಲಿ ನೈಪುಣ್ಯ ಪಡೆಯಲು ಸಾಧ್ಯವಾಗುತ್ತಿರುವುದು ಮತ್ತಷ್ಟು ಸಂತಸದ ಸಂಗತಿ" ಎಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ, ನೀರ್ಚಾಲು ಘಟಕದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಕೇರಳ ರಾಜ್ಯ ಐಟಿ ಸ್ಕೂಲ್ ಪ್ರೋಜೆಕ್ಟ್ ಕಾಸರಗೋಡು ವಿಭಾಗದ ಆಶ್ರಯದಲ್ಲಿ ನಡೆಯುತ್ತಿರುವ ವಿವಿಧ ಶಾಲೆಗಳ ಆಯ್ದ ವಿದ್ಯಾರ್ಥಿಗಳ ಎರಡು ದಿನಗಳ “ಗಣಕ ಯಂತ್ರ ಚಟುವಟಿಕೆಗಳತ್ತ ನೈಪುಣ್ಯ ಗಳಿಕೆ ಕಾರ್ಯಾಗಾರ”ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ಕಾರ್ಯದರ್ಶಿ ಜಯದೇವ ಖಂಡಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅನುಭವಿ ಕಂಪ್ಯೂಟರ್ ತಂತ್ರಜ್ಞ ವೇಣುಗೋಪಾಲ ಆರೋಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ರಾಜಶೇಖರ ಪದ್ಮಾರು ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಪ್ರಸಾದ ಸ್ವಾಗತಿಸಿ ಸುಶೀಲ.ಎಸ್ ವಂದಿಸಿದರು. ಶಾಂತಿ.ಕೆ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment