
29 November 2010
ಡಾ| ಮಹೇಶ್ - ಅಭಿನಂದನೆಗಳು

26 November 2010
ಕೂಳಕ್ಕೋಡ್ಳು ಮಹೇಶ್ಗೆ ಅಭಿನಂದನೆ - ಬನ್ನ್ರಿ...

24 November 2010
ವಿದ್ಯಾರಂಗ ಕಲಾ ಸಾಹಿತ್ಯೋತ್ಸವ



ಮಹಾಜನ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕ ಖಂಡಿಗೆ ಶಾಮ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕರುಣಾಕರ ಅನಂತಪುರ ಧ್ವಜಾರೋಹಣ ನೆರವೇರಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯರಾದ ಸೌಮ್ಯಾ ಮಹೇಶ್, ಗಂಗಾಧರ ಗೋಳಿಯಡ್ಕ, ಮಂಜುನಾಥ, ಮಹಾಜನ ವಿದ್ಯಾಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ನಟರಾಜ ರಾವ್ ಮತ್ತು ಬಾಲಕೃಷ್ಣ ಶೆಟ್ಟಿ, ಕಾರ್ಯಕಾರೀ ಸಮಿತಿ ಸದಸ್ಯ ಶಂಕರನಾರಾಯಣ ಭಟ್ ದೇವಸ್ಯ ಶುಭಹಾರೈಸಿದರು.
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಸ್ವಾಗತಿಸಿದರು. ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಶಿಕ್ಷಕಿ ವಾಣಿ ಪಿ.ಎಸ್ ಕಾರ್ಯಕ್ರಮ ನಿರೂಪಿಸಿದರು. ಕುಂಬಳೆ ಉಪಜಿಲ್ಲೆಯ ವಿವಿಧ ಶಾಲೆಗಳಿಂದ ಬಂದ ೬೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ೧೭ ವೇದಿಕೆಗಳಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಜೋನಿ ಕ್ರಾಸ್ತಾ, ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಜಿಲ್ಲಾ ಸಂಚಾಲಕ ಅಶೋಕನ್ ಕುಣಿಯೇರಿ, ಕೇರಳ ವ್ಯಾಪಾರೀ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಶುಭಹಾರೈಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಶೀಲಾ ಕೆ.ಎನ್. ಭಟ್ ಬಹುಮಾನ ವಿತರಿಸಿದರು.
ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕರುಣಾಕರ ಅನಂತಪುರ ಸ್ವಾಗತಿಸಿದರು. ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಉಪಜಿಲ್ಲಾ ಕಾರ್ಯದರ್ಶಿ ಜಯನ್ ಮಾಸ್ತರ್ ವಂದಿಸಿದರು. ಶಿಕ್ಷಕಿ ಶೈಲಜಾ.ಎ ಕಾರ್ಯಕ್ರಮ ನಿರೂಪಿಸಿದರು.
08 November 2010
೨೩ ಕ್ಕೆ ಉಪಜಿಲ್ಲಾ ವಿದ್ಯಾರಂಗ ಕಲೋತ್ಸವ, ಬನ್ನಿ...
ಕುಂಬಳೆ ಉಪಜಿಲ್ಲಾ ಮಟ್ಟದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಕಲೋತ್ಸವ-೨೦೧೦ ನಮ್ಮ ಶಾಲೆಯಲ್ಲಿ ೨೩.೧೧.೨೦೧೦ ಮಂಗಳವಾರ ಜರಗಲಿರುವುದು. ದಿನಪೂರ್ತಿ ನಡೆಯುವ ಈ ಕಾರ್ಯಕ್ರಮದಲ್ಲಿ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಗೆಡವಲಿದ್ದಾರೆ. ಈ ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಆತ್ಮೀಯ ಸ್ವಾಗತ.
01 November 2010
ರಾಜ್ಯೋತ್ಸವ ಶುಭಾಶಯಗಳು...
Subscribe to:
Posts (Atom)