Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

01 January 2011

ರಜಾಕಾಲದ ಕಂಪ್ಯೂಟರ್ ತರಬೇತಿ ಸಮಾರೋಪ

“ಕೇರಳ ವಿದ್ಯಾಭ್ಯಾಸ ಇಲಾಖೆ ಕಂಪ್ಯೂಟರ್ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ಐಟಿ ಸ್ಕೂಲ್, ಪ್ರೋಜೆಕ್ಟ್ ವಿದ್ಯಾರ್ಥಿಗಳಿಗಾಗಿ ಗಣಕ ಯಂತ್ರದ ಆಧುನಿಕ ಮಾಹಿತಿಗಳನ್ನು ಒದಗಿಸುತ್ತಿದೆ. ಕಂಪ್ಯೂಟರ್ ರಂಗದಲ್ಲಿ ಆಗುತ್ತಿರುವ ಹೊಸ ಬೆಳವಣಿಗೆಗಳ ಕುರಿತಾದ ವಿವರಗಳನ್ನು ಹಂಚಿಕೊಳ್ಳುವುದಕ್ಕಾಗಿ ರಜಾಕಾಲದ ಈ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪ್ರತೀ ಜಿಲ್ಲೆಯಲ್ಲೂ ಐದುಸಾವಿರ ಮಂದಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವಂತಹ ಕಾರ್ಯವನ್ನು ಈ ಬಾರಿ ಏರ್ಪಡಿಸಲಾಗಿದೆ. ಈ ಮೂಲಕ ಕೇರಳ ರಾಜ್ಯದ ಎಪ್ಪತ್ತುಸಾವಿರ ಮಂದಿ ವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ ಟೈಪ್ ಮಾಡುವುದು ಮತ್ತು ಇಂಟರ್‌ನೆಟ್ ಮೂಲಕ ವ್ಯವಹರಿಸಲು ಪ್ರಾಪ್ತರಾಗಲಿದ್ದಾರೆ” ಎಂದು ಕಾಸರಗೋಡು ಜಿಲ್ಲಾ ಮಾಸ್ಟರ್ ಟ್ರೈನರ್ ರಾಜೇಶ್ ಎಂ.ಪಿ ಹೇಳಿದರು. ಅವರು ನಮ್ಮ ಶಾಲೆಯಲ್ಲಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ಮೂರು ತಂಡಗಳ ಸ್ಟೂಡೆಂಟ್ ಸ್ಕೂಲ್ ಐಟಿ ಕೋ-ಓರ್ಡಿನೇಟರ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಇಂದು ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಜಯದೇವ ಖಂಡಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಸಂಪನ್ಮೂಲ ವ್ಯಕ್ತಿ ಕಾನ ರವಿಶಂಕರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಮುಕ್ತೇಶ.ಬಿ ಸ್ವಾಗತಿಸಿ ಉಮೈಮತ್ ವಂದಿಸಿದರು. ಗಿರಿಶಂಕರ.ಕೆ ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ ಮಯ್ಯ ಹಾಗೂ ಶ್ರೀರಶ್ಮಿ. ಸಿ.ಎಸ್ ಪ್ರಾರ್ಥನೆ ಹಾಡಿದರು. ಕಾಸರಗೋಡು ಜಿಲ್ಲಾ ಮಟ್ಟದಲ್ಲಿ ಒಟ್ಟು ೯೦ ಕೇಂದ್ರಗಳಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಒಟ್ಟು ೫೦೩೨ ಮಂದಿ ವಿದ್ಯಾರ್ಥಿಗಳು ಈ ವಿಶೇಷ ತರಬೇತಿಯನ್ನು ಪಡೆದಿದ್ದಾರೆ.

1 comment: