03 February 2011
ತಲಪಿದ ಪುಸ್ತಕಗಳು: ವಿದ್ಯಾರ್ಥಿಗಳಲ್ಲಿ ಸಂತಸ
ಒಂಭತ್ತನೇ ತರಗತಿಯ ಫಿಸಿಕಲ್ ಸಯನ್ಸ್, ಗಣಿತ ಮತ್ತು ಆಂಗ್ಲ ಭಾಷಾ ಪಠ್ಯ ಪುಸ್ತಕಗಳ ಎರಡನೇ ವೋಲ್ಯಮ್ ಪುಸ್ತಕ ದೊರೆಯದೆ ಕಂಗಾಲಾಗಿದ್ದ ಕುಂಬಳೆ ಮತ್ತು ಕಾಸರಗೋಡು ಉಪಜಿಲ್ಲಾ ವಿದ್ಯಾರ್ಥಿಗಳು ಈಗ ನಿಟ್ಟುಸಿರು ಬಿಡುತ್ತಿದ್ದಾರೆ. ಫೆಬ್ರವರಿ ಬಂದರೂ ಪಠ್ಯಪುಸ್ತಕಗಳು ದೊರೆಯದೆ ಗೊಂದಲಕ್ಕೆ ಒಳಗಾಗಿದ್ದ ವಿದ್ಯಾರ್ಥಿಗಳು ಪಠ್ಯ ಪುಸ್ತಕವನ್ನು ತಲಪಿಸುವಲ್ಲಿ ವಿಶೇಷ ಶ್ರಮವಹಿಸಿದ ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಎನ್.ಕೆ.ಮೋಹನದಾಸ್, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕರುಣಾಕರ ಅನಂತಪುರ, ಕಾಸರಗೋಡು ಉಪಜಿಲ್ಲಾ ವಿದ್ಯಾಧಿಕಾರಿ ಪುಂಡರೀಕಾಕ್ಷ ಆಚಾರ್ಯ ಮತ್ತು ತಂಡದವರ ಪ್ರಯತ್ನಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಪಠ್ಯಪುಸ್ತಕಗಳನ್ನು ತಲಪಿಸುವಲ್ಲಿ ಅವಿರತವಾಗಿ ಪ್ರಯತ್ನಿಸಿದ ಹಿರಿಯ ಅಧಿಕಾರಿಗಳನ್ನು ನಮ್ಮ ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಭಿನಂದಿಸಿದ್ದಾರೆ.
Subscribe to:
Post Comments (Atom)
No comments:
Post a Comment