
ಕಳೆದ ಆರು ತಿಂಗಳಿನಿಂದ ತರಗತಿಗಳನ್ನು ನಡೆಸಿಕೊಟ್ಟ ಗಾಯಕ ರಾಮಕೃಷ್ಣ ಕಾಟುಕುಕ್ಕೆಯವರನ್ನು ವಿದ್ಯಾರ್ಥಿಗಳು ಮತ್ತು ಹಿರಿಯರು ಶಾಲು,ಫಲ,ಸ್ಮರಣಿಕೆ ನೀಡಿ ವಂದಿಸಿದರು. ಈ ಸಂದರ್ಭದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದ ರಾಮಕೃಷ್ಣ ಕಾಟುಕುಕ್ಕೆಯವರು “ವಿದ್ಯಾರ್ಥಿಗಳ ಕಂಠದಿಂದ ದೇವರ ನಾಮವು ಮೊಳಗಿದರೆ ಅದೇ ನನಗೆ ಶ್ರೀನಿವಾಸನ ಸೇವೆ, ದೊರೆಯುವ ಸಂತೃಪ್ತಿ" ಎಂದು ಹೇಳಿದರು.
ಹಿರಿಯ ಅಂಕಣಕಾರ ಎಂ.ವಿ.ಭಟ್ ಮಧುರಂಗಾನ ಮತ್ತು ಶಾಲಾ ಆಡಳಿತ ಮಂಡಳಿಯ ಜಯದೇವ ಖಂಡಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಕ್ಷಕಿ ವಾಣಿ. ಪಿ.ಎಸ್ ಸ್ವಾಗತಿಸಿ ಚಿತ್ರಕಲಾ ಅಧ್ಯಾಪಕ ಗೋವಿಂದ ಶರ್ಮ ವಂದಿಸಿದರು.
No comments:
Post a Comment