Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

08 July 2011

ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ವಾರ್ಷಿಕ ಉದ್ಘಾಟನೆ

ನಮ್ಮ ಶಾಲಾ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ವಾರ್ಷಿಕ ಉದ್ಘಾಟನೆಯನ್ನು ಶಾಲಾ ಸಂಸ್ಕೃತ ಅಧ್ಯಾಪಕರಾದ ಶ್ರೀಯುತ ಎಸ್.ವಿ.ಭಟ್ ಇಂದು ಮಧ್ಯಾಹ್ನ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷತೆ ವಹಿಸಿದ ದೈಹಿಕ ಶಿಕ್ಷಕ ಶ್ರೀ ಎಂ.ಸೂರ್ಯನಾರಾಯಣ ವಿದ್ಯಾರ್ಥಿಗಳ ಹಸ್ತಪ್ರತಿ ‘ಗಾಯತ್ರಿ’ ಯನ್ನು ಬಿಡುಗಡೆಗೊಳಿಸಿದರು. ಕನ್ನಡ ಶಿಕ್ಷಕಿ ಶ್ರೀಮತಿ ವಾಣಿ. ಪಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಕಾರ್ಯಕ್ರಮದ ಅಂಗವಾಗಿ ಮನರಂಜನಾ ಕಾರ್ಯಕ್ರಮಗಳೂ ಜರಗಿದವು.


No comments:

Post a Comment