Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

26 August 2011

ರಾಜ್ಯ ಪುರಸ್ಕಾರ ಗೈಡ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನೀಡುವ ರಾಜ್ಯ ಪುರಸ್ಕಾರ ಗೈಡ್ ಪ್ರಶಸ್ತಿಗೆ ಭಾಜನರಾದ ನಮ್ಮ ಶಾಲಾ ಗೈಡ್‌ಗಳು...


ರಾಜ್ಯ ಪುರಸ್ಕಾರ ಸ್ಕೌಟ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನೀಡುವ ರಾಜ್ಯ ಪುರಸ್ಕಾರ ಸ್ಕೌಟ್ ಪ್ರಶಸ್ತಿಗೆ ಭಾಜನರಾದ ನಮ್ಮ ಶಾಲಾ ಸ್ಕೌಟ್‌ಗಳು...

21 August 2011

ಶ್ರೀಕೃಷ್ಣ ಜಯಂತಿ





ವಿದ್ಯೆ, ತಪಸ್ಸು, ಧ್ಯಾನ, ಜ್ಞಾನ, ಶೀಲ, ಗುಣ, ಧರ್ಮ ಈ ಏಳು ಗುಣಗಳು ಇಲ್ಲದಿರುವವರು ಭೂಮಿಗೆ ಭಾರವಾಗಿರುವ ಮನುಷ್ಯರೂಪದ ಮೃಗಗಳು. ಉತ್ತಮ ಮನಸ್ಸು ನಮ್ಮ ದೇಹವನ್ನು ಶ್ರೀಮಂತವಾಗಿಸುತ್ತವೆ. ಶುದ್ಧ ಮನಸ್ಸು ನಮ್ಮ ಆತ್ಮೀಯ ಗೆಳೆಯ. ಮನಸ್ಸನ್ನು ತಿದ್ದುವ ಕಾರ್ಯ ನಿತ್ಯ ನಿರಂತರವಾಗಬೇಕು. ಹಾಗಿದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯ, ಜನ್ಮ ಸಾರ್ಥಕವಾಗಲು ಸಾಧ್ಯ" ಎಂದು ಪೆರ್ಲ ಶ್ರೀಸತ್ಯನಾರಾಯಣ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಆರ್. ನರಸಿಂಹ ಭಟ್ ಹೇಳಿದರು. ಅವರು ಇಂದು ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ನಮ್ಮ ಶಾಲೆಗಳಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ ಮುಖ್ಯ ಅತಿಥಿಗಳಾಗಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಶಾಂತಿ.ಕೆ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.


ಮನರಂಜನಾ ಕಾರ್ಯಕ್ರಮದ ಅಂಗವಾಗಿ ಕೀರ್ತನ ಪ್ರವೀಣ ಶ್ರೀ ಬೆಳ್ಳೂರು ಕಮಲ ತನಯ ಅವರಿಂದ ‘ಭಕ್ತ ಕನಕದಾಸ’ ಹರಿಕಥೆ ಕಾರ್ಯಕ್ರಮ ಜರಗಿತು.


17 August 2011

ನೀರ್ಚಾಲು ಮದಕಕ್ಕೆ ಪ್ರಯಾಣ

ಮಳೆಗಾಲದಲ್ಲಿ ನೀರು ತುಂಬಿ ಮೈದಳೆಯುವ ಮದಕ ನೋಡಲು ವಿದ್ಯಾರ್ಥಿಗಳಿಗೆ ಬಲು ಖುಷಿ. ಅವರಿಗೆ ನೀರೆಚ್ಚರದ ಪಾಠ ಹೇಳಲು ನಮ್ಮ ಇಂದಿನ ಪಯಣ ನೀರ್ಚಾಲಿನ ಅಂಗನವಾಡಿ ಪರಿಸರದ ಮದಕಕ್ಕೆ...

16 August 2011

ಹೂ ರಂಗವಲ್ಲಿ...

ಶಾಲಾ ವಿಜ್ಞಾನ ಕ್ಲಬ್ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಆ೦ಗವಾಗಿ ನಡೆದ ಹೂವಿನಲ್ಲಿ ಭಾರತದ ಭೂಪಟವನ್ನು ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಡೆದ ತ೦ಡ .
ಶಾಲಾ ವಿಜ್ಞಾನ ಕ್ಲಬ್ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಆ೦ಗವಾಗಿ ನಡೆದ ಹೂವಿನಲ್ಲಿ ಕೇರಳದ ಭೂಪಟವನ್ನು ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ತಂಡ.

15 August 2011

ಸ್ವಾತಂತ್ರ್ಯ ಯಾತ್ರೆ

“ಹಿರಿಯರ ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವು ಸಂರಕ್ಷಿಸಬೇಕಾಗಿದೆ. ಇಂದು ಭಾರತ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರು ನಿಸ್ವಾರ್ಥವಾಗಿ ದೇಶಕ್ಕಾಗಿ ದುಡಿದರೆ ರಾಜಕಾರಣಿಗಳು ಸ್ವಂತ ಸಂಪತ್ತಿಗಾಗಿ ಹವಣಿಸುತ್ತಿದ್ದಾರೆ. ನಮ್ಮ ಸಂವಿಧಾನ ಭಾರತದ ಪ್ರಜಾಪ್ರಭುತ್ವಕ್ಕೆ ಆಧಾರ ಸ್ತಂಭವಾಗಿದೆ. ಆಡಳಿತಕ್ಕೆ ಚೌಕಟ್ಟು ನೀಡಿದರೂ ಇಂದು ನಡೆಯುತ್ತಿರುವ ಸಂವಿಧಾನಾತೀತವಾದ ಚಟುವಟಿಕೆಗಳು ದೇಶಕ್ಕೆ ಸವಾಲಾಗಿ ಪರಿಣಮಿಸುತ್ತಿದೆ. ಸ್ವಾತಂತ್ರ್ಯದ ಸಂದೇಶವನ್ನು ಉಳಿಸಿ ದೇಶದ ಹಿತಕ್ಕಾಗಿ ನಾವು ಶ್ರಮಿಸಬೇಕಾಗಿದೆ" ಎಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಚಂದ್ರಶೇಖರ ರೈ ಹೇಳಿದರು. ಅವರು ಇಂದು ನಮ್ಮ ಶಾಲೆಗಳಲ್ಲಿ ಜರಗಿದ ಸ್ವಾತಂತ್ರ್ಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಅಧ್ಯಕ್ಷತೆ ವಹಿಸಿದರು. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಶುಭಾಶಯಗಳನ್ನು ಹೇಳಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿ ಶಾಂತಿ.ಕೆ ಸ್ವಾಗತಿಸಿದರು. ಶಿಕ್ಷಕ ಎಂ.ಸೂರ್ಯನಾರಾಯಣ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಸ್ವಾತಂತ್ರ್ಯ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಿಂದ ನೀರ್ಚಾಲಿನಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಯಿತು.

11 August 2011

ಚಿನ್ನದ ಕುಸುರಿ ಕಲೆಯ ಕಡೆಗೆ...

ವಿದ್ಯಾರ್ಥಿಗಳಿಗೆ ಸಂದರ್ಶನದಲ್ಲಿ ತೀವ್ರ ಆಸಕ್ತಿ. ಪಠ್ಯಪುಸ್ತಕದಲ್ಲಿ ಕಲಿತ ಅಕ್ಕಸಾಲಿಗರನ್ನು ಪರಿಚಯ ಮಾಡಿಕೊಳ್ಳುವ ನಿಟ್ಟಿನಲ್ಲಿ ಇಂದು ನಮ್ಮ ಸಂದರ್ಶನ ನೀರ್ಚಾಲಿನ ಚಿನ್ನದ ಕೆಲಸಗಾರ ಭಾಸ್ಕರ ಆಚಾರ್ಯ ಅವರ ಬಳಿಗೆ. ವಿದ್ಯಾರ್ಥಿಗಳಿಗೆ ಬಂಗಾರದ ಧಾರಣೆ ಮುಗಿಲು ಮುಟ್ಟಿದ ಈ ದಿನಗಳಲ್ಲಿ ಇದು ಹೊಸ ಅನುಭವ...

05 August 2011

ಇಂದು ಶಾಲಾ ಚುನಾವಣೆ...


ನಮ್ಮ ಶಾಲಾ ವಿದ್ಯಾರ್ಥಿ ನಾಯಕನ ಆಯ್ಕೆಗಾಗಿ ಇಂದು ಚುನಾವಣೆ ನಡೆಯಿತು. ಎಲ್ಲಾ ತರಗತಿಯ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ತಮ್ಮ ಅಮೂಲ್ಯ ಮತಗಳನ್ನು ಚಲಾಯಿಸಿದರು. ಶಾಲಾ ಉಪನಾಯಕನ ಸ್ಥಾನಕ್ಕೆ ೯ಬಿ ತರಗತಿಯ ಸುಚಿತ್ರಾ ಅವಿರೋಧ ಆಯ್ಕೆಯಾಗಿದ್ದಳು. ಶಾಲಾ ವಿದ್ಯಾರ್ಥಿ ನಾಯಕ ಮತ್ತು ‘ಗಾಯತ್ರಿ’ ಭಿತ್ತಿಪತ್ರಿಕೆಯ ಸಂಪಾದಕ ಸ್ಥಾನಕ್ಕೆ ಸ್ಪರ್ಧೆ ನಡೆದಿತ್ತು. ಈಗ ಮತ ಎಣಿಕೆ ಪೂರ್ತಿಗೊಂಡಿದ್ದು ಶಾಲಾ ವಿದ್ಯಾರ್ಥಿ ನಾಯಕಿಯಾಗಿ ೧೦ಬಿ ತರಗತಿಯ ಶಾಂತಿ.ಕೆ ಮತ್ತು ‘ಗಾಯತ್ರಿ’ ಭಿತ್ತಿ ಪತ್ರಿಕೆಯ ಸಂಪಾದಕನಾಗಿ ೧೦ಎ ತರಗತಿಯ ಆಶಿಕ್. ಜಿ ಆಯ್ಕೆಯಾಗಿದ್ದಾರೆ. ಶುಭಾಶಯಗಳು...