Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

15 August 2011

ಸ್ವಾತಂತ್ರ್ಯ ಯಾತ್ರೆ

“ಹಿರಿಯರ ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವು ಸಂರಕ್ಷಿಸಬೇಕಾಗಿದೆ. ಇಂದು ಭಾರತ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರು ನಿಸ್ವಾರ್ಥವಾಗಿ ದೇಶಕ್ಕಾಗಿ ದುಡಿದರೆ ರಾಜಕಾರಣಿಗಳು ಸ್ವಂತ ಸಂಪತ್ತಿಗಾಗಿ ಹವಣಿಸುತ್ತಿದ್ದಾರೆ. ನಮ್ಮ ಸಂವಿಧಾನ ಭಾರತದ ಪ್ರಜಾಪ್ರಭುತ್ವಕ್ಕೆ ಆಧಾರ ಸ್ತಂಭವಾಗಿದೆ. ಆಡಳಿತಕ್ಕೆ ಚೌಕಟ್ಟು ನೀಡಿದರೂ ಇಂದು ನಡೆಯುತ್ತಿರುವ ಸಂವಿಧಾನಾತೀತವಾದ ಚಟುವಟಿಕೆಗಳು ದೇಶಕ್ಕೆ ಸವಾಲಾಗಿ ಪರಿಣಮಿಸುತ್ತಿದೆ. ಸ್ವಾತಂತ್ರ್ಯದ ಸಂದೇಶವನ್ನು ಉಳಿಸಿ ದೇಶದ ಹಿತಕ್ಕಾಗಿ ನಾವು ಶ್ರಮಿಸಬೇಕಾಗಿದೆ" ಎಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಚಂದ್ರಶೇಖರ ರೈ ಹೇಳಿದರು. ಅವರು ಇಂದು ನಮ್ಮ ಶಾಲೆಗಳಲ್ಲಿ ಜರಗಿದ ಸ್ವಾತಂತ್ರ್ಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಅಧ್ಯಕ್ಷತೆ ವಹಿಸಿದರು. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಶುಭಾಶಯಗಳನ್ನು ಹೇಳಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿ ಶಾಂತಿ.ಕೆ ಸ್ವಾಗತಿಸಿದರು. ಶಿಕ್ಷಕ ಎಂ.ಸೂರ್ಯನಾರಾಯಣ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಸ್ವಾತಂತ್ರ್ಯ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಿಂದ ನೀರ್ಚಾಲಿನಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಯಿತು.

No comments:

Post a Comment