Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

21 August 2011

ಶ್ರೀಕೃಷ್ಣ ಜಯಂತಿ





ವಿದ್ಯೆ, ತಪಸ್ಸು, ಧ್ಯಾನ, ಜ್ಞಾನ, ಶೀಲ, ಗುಣ, ಧರ್ಮ ಈ ಏಳು ಗುಣಗಳು ಇಲ್ಲದಿರುವವರು ಭೂಮಿಗೆ ಭಾರವಾಗಿರುವ ಮನುಷ್ಯರೂಪದ ಮೃಗಗಳು. ಉತ್ತಮ ಮನಸ್ಸು ನಮ್ಮ ದೇಹವನ್ನು ಶ್ರೀಮಂತವಾಗಿಸುತ್ತವೆ. ಶುದ್ಧ ಮನಸ್ಸು ನಮ್ಮ ಆತ್ಮೀಯ ಗೆಳೆಯ. ಮನಸ್ಸನ್ನು ತಿದ್ದುವ ಕಾರ್ಯ ನಿತ್ಯ ನಿರಂತರವಾಗಬೇಕು. ಹಾಗಿದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯ, ಜನ್ಮ ಸಾರ್ಥಕವಾಗಲು ಸಾಧ್ಯ" ಎಂದು ಪೆರ್ಲ ಶ್ರೀಸತ್ಯನಾರಾಯಣ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಆರ್. ನರಸಿಂಹ ಭಟ್ ಹೇಳಿದರು. ಅವರು ಇಂದು ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ನಮ್ಮ ಶಾಲೆಗಳಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ ಮುಖ್ಯ ಅತಿಥಿಗಳಾಗಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಶಾಂತಿ.ಕೆ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.


ಮನರಂಜನಾ ಕಾರ್ಯಕ್ರಮದ ಅಂಗವಾಗಿ ಕೀರ್ತನ ಪ್ರವೀಣ ಶ್ರೀ ಬೆಳ್ಳೂರು ಕಮಲ ತನಯ ಅವರಿಂದ ‘ಭಕ್ತ ಕನಕದಾಸ’ ಹರಿಕಥೆ ಕಾರ್ಯಕ್ರಮ ಜರಗಿತು.


2 comments:

  1. Grand celebration! ಎಲ್ಲರಿಗೂ ಶ್ರೀ ಕ್ರಿಷ್ಣ ಜನ್ಮಾಷ್ಟಮಿಯ ಶುಭಾಶಯಗಳು.

    ReplyDelete