14 December 2012
12 December 2012
ದಶಂಬರ ಬಂತೆಂದರೆ ಶಾಲಾ ವಿದ್ಯಾರ್ಥಿಗಳಿಗೆ ಎರಡು ಅಬ್ಬರಗಳು. ಮೊದಲನೆಯದು ಕಲೋತ್ಸವ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗುವ ಕಲೋತ್ಸವ ಸ್ಪರ್ಧೆಗಳು ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ಈ ತಿಂಗಳ ಆರಂಭದಲ್ಲಿ ನಡೆದವು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಸ್ಪರ್ಧೆಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳೂ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಸಂಸ್ಕೃತೋತ್ಸವದ ಪ್ರೌಢಶಾಲಾ ಮತ್ತು ಯುಪಿ ವಿಭಾಗದ ಸ್ಪರ್ಧೆಗಳಲ್ಲಿ ಅತ್ಯಧಿಕ ಅಂಕ ಪಡೆದು ಸಂಸ್ಕೃತೋತ್ಸವದ ಸಮಗ್ರ ಪ್ರಶಸ್ತಿಯನ್ನು ಶಾಲೆಗೆ ತಂದಿದ್ದಾರೆ. ಅವರಿಗೆ ಶುಭಾಶಯಗಳು.
ನಾಳೆಯಿಂದ ಮಧ್ಯಾವಧಿ ಪರೀಕ್ಷೆಗಳು ಆರಂಭ. ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಅವರಿಗೂ ಶುಭಾಶಯಗಳು.
ನಾಳೆಯಿಂದ ಮಧ್ಯಾವಧಿ ಪರೀಕ್ಷೆಗಳು ಆರಂಭ. ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಅವರಿಗೂ ಶುಭಾಶಯಗಳು.
21 November 2012
ಜಿಲ್ಲಾ ವಿಜ್ಞಾನ ಮೇಳದಲ್ಲಿ ಪ್ರಶಸ್ತಿ
20.11.2012 ರಂದು ಚಟ್ಟಂಚಾಲ್ನಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ವಿಜ್ಞಾನ ಮೇಳದ ಪ್ರೌಢಶಾಲಾ ವಿಭಾಗದ ‘ಸ್ಥಿರ ಮಾದರಿ’ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಲ್ಲಿಕೋಟೆಯಲ್ಲಿ ಜರಗಲಿರುವ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸ್ವಾಗತ ರೈ. ಬಿ ಮತ್ತು ಅಭಿಲಾಶ್ ಶರ್ಮ. ಕೆ ಅರ್ಹತೆ ಪಡೆದಿದ್ದಾರೆ. ಸ್ವಾಗತ ರೈ - ಶಿಕ್ಷಕ ದಂಪತಿಯರಾದ ಚಂದ್ರಶೇಖರ ರೈ. ಕೆ ಮತ್ತು ಚಂದ್ರಾವತಿ. ಬಿ ಇವರ ಸುಪುತ್ರಿ. ಅಭಿಲಾಶ್ ಶರ್ಮ.ಕೆ - ಹಿರಿಯ ಪತ್ರಕರ್ತ ಶಂಕರನಾರಾಯಣ ಕಿದೂರು ಮತ್ತು ಕೃಷ್ಣವೇಣಿ ಕಿದೂರು ಇವರ ಪುತ್ರ.
17 November 2012
ಮಾದಕ ದ್ರವ್ಯ ವಿರುದ್ಧ ಜಾಗೃತಿ
ಇಂದು ಅರಾಹ್ನ ನಮ್ಮ ಶಾಲೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳಾದ ಸತೀಶ್ ಬಲ್ಲಾಳ್ ಮತ್ತು ಮದನನ್ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯ ಉಪಯೋಗದ ವಿರುದ್ಧ ಜಾಗೃತಿ ತರಗತಿಯನ್ನು ನಡೆಸಿದರು. ಶಾಲಾ ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಶಿಕ್ಷಕ ಕೆ. ಶಂಕರನಾರಾಯಣ ಶರ್ಮ ಧನ್ಯವಾದ ಸಮರ್ಪಿಸಿದರು. ಹಿರಿಯ ಶಿಕ್ಷಕಿ ಭುವನೇಶ್ವರಿ. ಎ ಕಾರ್ಯಕ್ರಮ ನಿರೂಪಿಸಿದರು.
ಗ್ಲಾಸ್ ಪೈಂಟಿಂಗ್ ಮತ್ತು ಭಾವಗೀತೆ ಗಾಯನ ತರಬೇತಿ

24 October 2012
19 October 2012
ಕಾಸರಗೋಡಿನಲ್ಲಿ ಕನ್ನಡ ಉಳಿದಿದೆ: ಪ್ರಕಾಶ್ ಮತ್ತಿಹಳ್ಳಿ

ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾರ್ಯದರ್ಶಿ ಎಂ.ವಿ. ಮಹಾಲಿಂಗೇಶ್ವರ ಭಟ್, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಸ್ವಾಗತಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಧನ್ಯವಾದ ಸಮರ್ಪಿಸಿದರು. ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಕಾರ್ಯಕ್ರಮ ನಿರೂಪಿಸಿದರು.
17 October 2012
19ರಂದು ಗ್ರಂಥಾಲಯ ಕಟ್ಟಡ - ಕಾಮಗಾರಿ ಪರಿಶೀಲನಾ ಸಭೆ
ನಮ್ಮ ಪ್ರೌಢಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಧನ ಸಹಾಯದಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡದ ಕಾಮಗಾರಿ ಪರಿಶೀಲನಾ ಸಭೆಯು ೧೯.೧೦.೨೦೧೨ ಶುಕ್ರವಾರ ಮಧ್ಯಾಹ್ನ ೧೨ ಗಂಟೆಗೆ ಜರಗಲಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಚ್.ವಿ.ರಾಮಚಂದ್ರ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿಯವರು ಪರಿಶೀಲನಾ ವರದಿಯನ್ನು ಮಂಡಿಸುವರು. ಶಾಲಾ ಹಳೆ ವಿದ್ಯಾರ್ಥಿ ಕುಂಜಾರು ಸುಬ್ರಾಯ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಶುಭ ಹಾರೈಸಲಿದ್ದಾರೆ.
ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿಯವರು ಪರಿಶೀಲನಾ ವರದಿಯನ್ನು ಮಂಡಿಸುವರು. ಶಾಲಾ ಹಳೆ ವಿದ್ಯಾರ್ಥಿ ಕುಂಜಾರು ಸುಬ್ರಾಯ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಶುಭ ಹಾರೈಸಲಿದ್ದಾರೆ.
12 October 2012
27 September 2012
ಶಾಲಾ ಮಟ್ಟದ ವೃತ್ತಿ ಪರಿಚಯ ಮೇಳ
ನಿನ್ನೆ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಒಂದು ಹೊಸ ಅನುಭವ. ಪ್ರತೀ ವರ್ಷವೂ ಉಪಜಿಲ್ಲಾ ಮಟ್ಟದಲ್ಲಿ ನಡೆಯುವ ವೃತ್ತಿ ಪರಿಚಯ ಮೇಳಕ್ಕೆ ಪೂರ್ವಭಾವಿಯಾಗಿ ನಮ್ಮ ಶಾಲಾ ಮಟ್ಟದಲ್ಲಿ ಪ್ರಪ್ರಥಮ ಬಾರಿಗೆ ನಿನ್ನೆ ವೃತ್ತಿಪರಿಚಯ ಮೇಳವನ್ನು ಆಯೋಜಿಸಲಾಯಿತು. ಶಾಲಾ ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಇವರ ಮುಂದಾಳ್ತನದಲ್ಲಿ ನಡೆದ ಸ್ಪರ್ಧಾ ಕಾರ್ಯಕ್ರಮದ ಒಂದು ನೋಟವನ್ನು ನಿಮ್ಮ ಮುಂದೆ ಇರಿಸುತ್ತಿದ್ದೇವೆ. ಸ್ಪರ್ಧೆಗಳು ವಿವಿಧ ವಿಭಾಗಳಲ್ಲಿ ನಡೆದಿದ್ದು ವಿಜೇತ ವಿದ್ಯಾರ್ಥಿಗಳು ಮುಂದಿನ ತಿಂಗಳು ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯುವ ಉಪಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಶುಭಾಶಯಗಳು...
22 September 2012
ಸಾಹಿತ್ಯ ಶಿಬಿರ 2012
ನಮ್ಮ ಶಾಲೆಯಲ್ಲಿ 21.09.2012 ಶುಕ್ರವಾರ ಜರಗಿದ ‘ಸಾಹಿತ್ಯ ಶಿಬಿರ’ದಲ್ಲಿ ಸಾಹಿತಿ ವಿ.ಬಿ.ಕುಳಮರ್ವ ಕಥಾ ರಚನೆ ಮತ್ತು ಸಾಹಿತಿ ಬಾಲ ಮಧುರಕಾನನ ಕವನ ರಚನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಾದ ಅರವಿಂದ ಎಸ್.ವಿ ಸ್ವಾಗತಿಸಿ ಸುಷ್ಮಾ.ಕೆ ವಂದಿಸಿದರು. ರಮ್ಯಶ್ರೀ. ಎ ಪ್ರಾರ್ಥಿಸಿದಳು. ಕ್ಷಮಾದೇವಿ.ಕೆ ಕಾರ್ಯಕ್ರಮ ನಿರೂಪಿಸಿದಳು.
ಚೈತನ್ಯ ಸಂರಕ್ಷಣೆ - ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ
ಕನ್ನಡ, ಮಲಯಾಳ ಮತ್ತು ಆಂಗ್ಲ ಭಾಷಾ ವಿದ್ಯಾರ್ಥಿಗಳನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ಸ್ಪರ್ಧೆ ನಡೆಸುವ ಕ್ರಮ ತೀರಾ ಸರಿಯಲ್ಲ. ಯಾಕೆಂದರೆ ವಿವಿಧ ಭಾಷೆಗಳನ್ನು, ಶೈಲಿಯನ್ನು ಒಂದೇ ತಕ್ಕ್ಡಿಯಲ್ಲಿ ಇರಿಸಿ ತೂಗುವುದು ಸುಲಭವಲ್ಲ, ಹಾಗೂ ಅನೇಕ ಸಂದರ್ಭದಲ್ಲಿ ಬಹುಮಾನ ಮಲಯಾಳಿ ಪ್ರಾಬಲ್ಯಕ್ಕೆ ಒಳಗಾಗುತ್ತದೆ. ಈ ರೀತಿಯ ಪ್ರಸಂಗಗಳು ನಮ್ಮ ಕಾಸರಗೋಡಿನಲ್ಲಿ ಪದೇ ಪದೇ ಎದುರಾಗುತ್ತದೆ. ಆದರೆ ಮೊನ್ನೆ 20.09.2012 ಗುರುವಾರದಂದು ಬಹುಮಾನ ನಮ್ಮ ಕನ್ನಡದ ಪಾಲಿಗೆ ಒಲಿಯಿತು. ಕೇರಳ ಸರಕಾರದ ಕ್ರೀಡಾ ಮತ್ತು ಯುವಜನ ಖಾತೆಯು ‘ಚೈತನ್ಯ ಸಂರಕ್ಷಣೆ’ಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಳ್ಳೇರಿಯಾ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕ್ಷಮಾದೇವಿ.ಕೆ ಕನ್ನಡದಲ್ಲಿ ಮಾತನಾಡಿ ಪ್ರಥಮ ಬಹುಮಾನ ‘ಸೈಕಲ್’ ಪಡೆದುಕೊಂಡಳು. ಬೇಳ ಕುಮಾರಮಂಗಲ ನಿವಾಸಿ ಬಾಲಕೃಷ್ಣಮೂರ್ತಿ ಮತ್ತು ಸತ್ಯಶೀಲಾ ಇವರ ಪುತ್ರಿಯಾದ ಈಕೆಗೆ ನಮ್ಮ ಶುಭ ಹಾರೈಕೆಗಳು.
14 September 2012
ಏಣಿಯರ್ಪು ಕಡೆಗೆ ಪ್ರಯಾಣ...

06 September 2012
ಶಿಕ್ಷಕ ದಿನಾಚರಣೆ
ವಿದ್ಯಾರ್ಥಿಗಳ ಕಾಲುವಾರ್ಷಿಕ ಪರೀಕ್ಷೆ ಇನ್ನೂ ಮುಗಿದಿಲ್ಲ. ಮುಂದಿನ ಸೋಮವಾರ ಮತ್ತು ಮಂಗಳವಾರ ಮತ್ತೆ ಪರೀಕ್ಷೆಗಳಿವೆ. ಈ ಒತ್ತಡಗಳ ನಡುವೆ ನಾವು ಸರಳವಾಗಿ ಶಿಕ್ಷಕರ ದಿನವನ್ನು ಆಚರಿಸಿಕೊಂಡೆವು. ಒಂಬತ್ತನೆಯ ತರಗತಿ ಹುಡುಗ ಆದರ್ಶ ಪೆನ್ಸಿಲ್ ಚಿತ್ರಗಳನ್ನು ಬಿಡಿಸುವುದರಲ್ಲಿ ಚೆನ್ನಾಗಿ ಪಳಗುತ್ತಿದ್ದಾನೆ. ಅವನು ಬಿಡಿಸಿದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ರೇಖಾಚಿತ್ರವನ್ನು ಒಂಬತ್ತನೆಯ ತರಗತಿ ಹುಡುಗರು ಹಿರಿಯ ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ಅವರಿಗೆ ಸಮರ್ಪಿಸಿದರು.
05 September 2012
ಮಕ್ಕಳ ಧ್ವನಿ - 2012
ಮೂಡುಬಿದಿರೆ ವಿದ್ಯಾಗಿರಿಯ ಶಿವರಾಮ ಕಾರಂತ ವೇದಿಕೆಯಲ್ಲಿ ಮೊನ್ನೆ ಸೆಪ್ಟೆಂಬರ್ 1 ಮತ್ತು 2 ನೇ ತಾರೀಕಿನಂದು ಜರಗಿದ ಉಡುಪಿ - ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಹತ್ತೊಂಬತ್ತನೆಯ ‘ಮಕ್ಕಳ ಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಮ್ಮ ಶಾಲಾ ವಿದ್ಯಾರ್ಥಿಗಳು ರಸಪ್ರಶ್ನೆ ಸಹಿತ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ.
04 September 2012
30 August 2012
18 August 2012
15 August 2012
ಸ್ವಾತಂತ್ರ್ಯ ಯಾತ್ರೆ


ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಹಿರಿಯ ಶಿಕ್ಷಕರಾದ ಎಸ್.ವಿ.ಭಟ್, ಕೆ.ನಾರಾಯಣ ಭಟ್ ಮತ್ತು ಎಂ.ಸೂರ್ಯನಾರಾಯಣ ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು.
ವಿದ್ಯಾರ್ಥಿಗಳಿಂದ ನೀರ್ಚಾಲಿನಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಯಿತು.
13 August 2012
‘ಹೂ’ಗಳನ್ನು ಉಪಯೋಗಿಸಿ ಭೂಪಟ

10 August 2012
“ಶ್ರೀಕೃಷ್ಣ ಆತ್ಮೀಯ ದೇವರು": ಕೆ.ಶಿವಕುಮಾರ್
“ಶ್ರೀಕೃಷ್ಣನ ಬಾಲಲೀಲೆಗಳು ಎಂದೆಂದಿಗೂ ಚೇತೋಹಾರಿ. ಧರ್ಮ ಸಂಸ್ಥಾಪನೆಗಾಗಿ ಅವನು ಕೈಗೊಂಡ ಕಾರ್ಯಗಳ ಸಮಾಜಕ್ಕೆ ಆದರ್ಶ. ಅವನ ಪಥ ಅನುಕರಣೀಯ, ಆದರಿಂದಲೇ ಆತ ಎಲ್ಲರಿಗೂ ಆತ್ಮೀಯ ದೇವರು ಎಂದು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು ೦೯.೦೮.೨೦೧೨ ಗುರುವಾರ ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ್ ರಾವ್ ಮುಖ್ಯ ಅತಿಥಿಗಳಾಗಿದ್ದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ. ಗೋವಿಂದ ಭಟ್ ಉಪಸ್ಥಿತರಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಸುಶೀಲಾ.ಎಸ್ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ಹಳೆ ವಿದ್ಯಾರ್ಥಿಗಳಾದ ಹೇಮಶ್ರೀ ಕಾಕುಂಜೆ ಮತ್ತು ಶ್ರೀವಾಣಿ ಕಾಕುಂಜೆ ಇವರಿಂದ ‘ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ ಜರಗಿತು. ವಯಲಿನ್ನಲ್ಲಿ ಪ್ರಭಾಕರ ಕುಂಜಾರು ಮತ್ತು ಮೃದಂಗದಲ್ಲಿ ಶ್ರೀಧರ ಭಟ್ ಬಡಕ್ಕೇಕೆರೆ ಸಹಕರಿಸಿದರು.
11 July 2012
29 June 2012
ದಿ|ಖಂಡಿಗೆ ಶಾಮ ಭಟ್ಟರ ತೈಲ ಚಿತ್ರ ಅನಾವರಣ

ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಅಧ್ಯಕ್ಷತೆ ವಹಿಸಿದ್ದರು. ಪೂರ್ವ ವಿದ್ಯಾರ್ಥಿಗಳಾದ ಬಳ್ಳಪದವು ಶಂಕರನಾರಾಯಣ ಭಟ್, ಕುಂಜಾರು ಸುಬ್ರಾಯ ಭಟ್, ಚಿತ್ರ ಕಲಾವಿದ ರವಿ ಪಿಲಿಕ್ಕೋಡ್, ಡಾ|ಸುಬ್ರಹ್ಮಣ್ಯ ಭಟ್ ಖಂಡಿಗೆ, ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಶುಭಾಶಯಗಳನ್ನು ಅರ್ಪಿಸಿದರು.

ಚಿತ್ರ ಕಲಾವಿದ ರವಿ ಪಿಲಿಕ್ಕೋಡ್ ಅವರನ್ನು ಡಾ|ಸುಬ್ರಹ್ಮಣ್ಯ ಭಟ್ ಖಂಡಿಗೆ ಶಾಲು ಹೊದೆಸಿ ಫಲ ಸಮರ್ಪಣೆ ಮಾಡುವುದರ ಮೂಲಕ ಗೌರವಿಸಿದರು. ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಸ್ವಾಗತಿಸಿ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ಚಂದ್ರಶೇಖರ ರೈ ಮತ್ತು ಗೋವಿಂದ ಶರ್ಮ ಕೋರಿಕ್ಕಾರು ಕಾರ್ಯಕ್ರಮ ನಿರೂಪಿಸಿದರು.
26 June 2012
11 June 2012
05 June 2012
04 June 2012
ಶಾಲಾ ಪ್ರವೇಶೋತ್ಸವ 2012
ಬೇಸಿಗೆ ರಜಾ ಕಾಲ ಕಳೆದಿದೆ, ಮುಂಗಾರು ಕೇರಳಕ್ಕೆ ಕಾಲಿಡುವ ಹೊತ್ತಿನಲ್ಲೇ ಹೊಸ ಅಧ್ಯಯನ ವರ್ಷ ಆರಂಭವಾಗಿದೆ. ಹೊಸ ಹೊಸ ಕನಸನ್ನು ಕಟ್ಟಿಕೊಂಡು ಶಾಲೆಯ ಕಡೆಗೆ ಬಂದ ಚಿಣ್ಣರನ್ನು ಸ್ವಾಗತಿಸುವ ಕಾರ್ಯವೂ ಇಂದು ನಡೆದಿದೆ. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಸಿಹಿತಿಂಡಿ ವಿತರಿಸಿ ಹೊಸ ವಿದ್ಯಾರ್ಥಿಗಳನ್ನು ಶಾಲೆಗೆ ಆದರದಿಂದ ಬರಮಾಡಿಕೊಂಡಿದ್ದಾರೆ. ಈಗ ವಿದ್ಯಾರ್ಥಿಗಳ ಕನಸುಗಳು ಗರಿಗೆದರುತ್ತಿವೆ...
02 May 2012
27 April 2012
ಎಸ್ ಎಸ್ ಎಲ್ ಸಿ ಫಲಿತಾಂಶ ಬಂತು...
98% ಫಲಿತಾಂಶ ದಾಖಲಿಸಿದ್ದೇವೆ. ಈ ಬಾರಿಯ ಕೇರಳ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯಲ್ಲಿ ಪರೀಕ್ಷೆ ಬರೆದ ೧೫೮ ಮಂದಿಯಲ್ಲಿ ೧೫೫ ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಲು ಸಂತೋಷಪಡುತ್ತಿದ್ದೇವೆ. ಕೇರಳ ರಾಜ್ಯ ಮಟ್ಟದ ಸರಾಸರಿ 93% ಆಗಿದ್ದು, ಅದಕ್ಕಿಂತ ಹೆಚ್ಚು ಫಲಿತಾಂಶ ನಮ್ಮ ಶಾಲೆಗೆ ಬಂದಿರುವುದು ಸಂತಸದ ಇನ್ನೊಂದು ವಿಷಯ. ಶಾಂತಿ.ಕೆ, ರಂಜನಾ.ಕೆ, ರಂಜಿತಾ.ಬಿ, ಗುರುವಿನಯ ಕೃಷ್ಣ ಕೆ.ಆರ್, ನಂದನ.ಎ, ಶಶಾಂಕ ಶರ್ಮ. ಎಸ್ ಈ ಆರು ಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದು ಗೆಲುವಿನ ಕಿರೀಟಕ್ಕೆ ಗರಿಯನ್ನು ಸೇರಿಸಿದ್ದಾರೆ. ಶುಭಾಶಯಗಳು...
24 April 2012
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಮುಂದಿನ ವಾರ
ಮೌಲ್ಯಮಾಪನ ಮೊನ್ನೆ ಇಪ್ಪತ್ತರಂದು ಕೊನೆಗೊಂಡಿದೆ. ಮುಂದಿನ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಿಸಿಲಿನ ಬೇಗೆಯ ನಡುವೆ, ಕಾಯುವಿಕೆ ವಿದ್ಯಾರ್ಥಿಗಳಿಗೂ, ನಮಗೂ ಅವರ್ಣನೀಯ ಅನುಭವಗಳನ್ನು ಕಟ್ಟಿಕೊಡುತ್ತಿದೆ. ಮುಂದಿನ ಕಲಿಯುವಿಕೆಯ ದಾರಿಯನ್ನು ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ನಮ್ಮ ಶುಭಾಶಯಗಳು...
30 March 2012
ನಾಳೆಯಿಂದ ರಜೆ...

ವಸಂತ ಕಾಲ ನಮ್ಮ ಮುಂದೆ ಇದೆ...
ಎಲ್ಲ ಚಿಂತೆ - ಚಿಂತನೆಗಳ ನಡುವೆ ನಮ್ಮ ಶುಭಾಶಯಗಳನ್ನೂ ಸ್ವೀಕರಿಸಿ...
23 March 2012
ಚಾಂದ್ರಮಾನ ಯುಗಾದಿಯ ಶುಭಾಶಯಗಳು...

ನಮ್ಮ ಶಾಲೆಯ ಪಡು ಸಭಾಂಗಣದಲ್ಲಿ ಇಂದು ಒಂದು ಆತ್ಮೀಯ ಕಾರ್ಯಕ್ರಮ. ಶಾಲೆಯ ಪೂರ್ವ ವಿದ್ಯಾರ್ಥಿ, ಸಂಸ್ಕೃತ ವಿದ್ವಾಂಸ ವೇದಮೂರ್ತಿ ಬಳ್ಳಪದವು ಶಂಕರನಾರಾಯಣ ಭಟ್ಟರ ಪ್ರಾಯೋಜಕತ್ವದಲ್ಲಿ ನಂದನ ಸಂವತ್ಸರದ ಆರಂಭದ ಈ ಸುದಿನದಂದು ಗಣಪತಿ ಪೂಜೆ ನಡೆಯಿತು. ಕರ್ನಾಟಕ ಬ್ಯಾಂಕಿನ ನೀರ್ಚಾಲು ಶಾಖಾ ಪ್ರಬಂಧಕ ಶಿವಕುಮಾರ್ ದೀಪ ಬೆಳಗಿಸಿ ‘ಮಹಾಜನ’ ಸಂಸ್ಥೆಯ ಶತಮಾನೋತ್ಸವ ವರ್ಷಕ್ಕೆ ಚಾಲನೆ ನೀಡಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಉಪಸ್ಥಿತರಿದ್ದರು.
05 March 2012
ರಾಷ್ಟ್ರಪತಿ ಸ್ಕೌಟ್ ಪ್ರಶಸ್ತಿ

07 February 2012
ಶಾಲಾ ವಾರ್ಷಿಕೋತ್ಸವ

ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ, ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ, ಕಿರಿಯ ಪ್ರಾಥಮಿಕ ಶಾಲಾ ಮಾತೃ ಸಂಘದ ಅಧ್ಯಕ್ಷೆ ಸುನೀತಾ, ಮಹಾಜನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ಶುಭಹಾರೈಸಿದರು.
ನಿವೃತ್ತ ಮುಖ್ಯೋಪಾಧ್ಯಾಯ ಕೆ.ಶಾಮ ಭಟ್ ಬಹುಮಾನ ವಿತರಿಸಿದರು. ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವಿಕೃಷ್ಣ. ಯು ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಶಾರೀರಿಕ ಶಿಕ್ಷಣ ಅಧ್ಯಾಪಕ ಎಂ.ಸೂರ್ಯನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಇತ್ತೀಚೆಗೆ ಅಗಲಿದ ಚೇತನ ಖಂಡಿಗೆ ಶಾಮ ಭಟ್ಟರ ಆತ್ಮಕ್ಕೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಬೆಳಗ್ಗೆ ಮಹಾಜನ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆಯೂ ಜರಗಿತು.
Subscribe to:
Posts (Atom)