ಬೇಸಿಗೆ ರಜಾ ಕಾಲ ಕಳೆದಿದೆ, ಮುಂಗಾರು ಕೇರಳಕ್ಕೆ ಕಾಲಿಡುವ ಹೊತ್ತಿನಲ್ಲೇ ಹೊಸ ಅಧ್ಯಯನ ವರ್ಷ ಆರಂಭವಾಗಿದೆ. ಹೊಸ ಹೊಸ ಕನಸನ್ನು ಕಟ್ಟಿಕೊಂಡು ಶಾಲೆಯ ಕಡೆಗೆ ಬಂದ ಚಿಣ್ಣರನ್ನು ಸ್ವಾಗತಿಸುವ ಕಾರ್ಯವೂ ಇಂದು ನಡೆದಿದೆ. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಸಿಹಿತಿಂಡಿ ವಿತರಿಸಿ ಹೊಸ ವಿದ್ಯಾರ್ಥಿಗಳನ್ನು ಶಾಲೆಗೆ ಆದರದಿಂದ ಬರಮಾಡಿಕೊಂಡಿದ್ದಾರೆ. ಈಗ ವಿದ್ಯಾರ್ಥಿಗಳ ಕನಸುಗಳು ಗರಿಗೆದರುತ್ತಿವೆ...
No comments:
Post a Comment