30 August 2012
18 August 2012
15 August 2012
ಸ್ವಾತಂತ್ರ್ಯ ಯಾತ್ರೆ


ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಹಿರಿಯ ಶಿಕ್ಷಕರಾದ ಎಸ್.ವಿ.ಭಟ್, ಕೆ.ನಾರಾಯಣ ಭಟ್ ಮತ್ತು ಎಂ.ಸೂರ್ಯನಾರಾಯಣ ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು.
ವಿದ್ಯಾರ್ಥಿಗಳಿಂದ ನೀರ್ಚಾಲಿನಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಯಿತು.
13 August 2012
‘ಹೂ’ಗಳನ್ನು ಉಪಯೋಗಿಸಿ ಭೂಪಟ

10 August 2012
“ಶ್ರೀಕೃಷ್ಣ ಆತ್ಮೀಯ ದೇವರು": ಕೆ.ಶಿವಕುಮಾರ್
“ಶ್ರೀಕೃಷ್ಣನ ಬಾಲಲೀಲೆಗಳು ಎಂದೆಂದಿಗೂ ಚೇತೋಹಾರಿ. ಧರ್ಮ ಸಂಸ್ಥಾಪನೆಗಾಗಿ ಅವನು ಕೈಗೊಂಡ ಕಾರ್ಯಗಳ ಸಮಾಜಕ್ಕೆ ಆದರ್ಶ. ಅವನ ಪಥ ಅನುಕರಣೀಯ, ಆದರಿಂದಲೇ ಆತ ಎಲ್ಲರಿಗೂ ಆತ್ಮೀಯ ದೇವರು ಎಂದು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು ೦೯.೦೮.೨೦೧೨ ಗುರುವಾರ ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ್ ರಾವ್ ಮುಖ್ಯ ಅತಿಥಿಗಳಾಗಿದ್ದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ. ಗೋವಿಂದ ಭಟ್ ಉಪಸ್ಥಿತರಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಸುಶೀಲಾ.ಎಸ್ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ಹಳೆ ವಿದ್ಯಾರ್ಥಿಗಳಾದ ಹೇಮಶ್ರೀ ಕಾಕುಂಜೆ ಮತ್ತು ಶ್ರೀವಾಣಿ ಕಾಕುಂಜೆ ಇವರಿಂದ ‘ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ ಜರಗಿತು. ವಯಲಿನ್ನಲ್ಲಿ ಪ್ರಭಾಕರ ಕುಂಜಾರು ಮತ್ತು ಮೃದಂಗದಲ್ಲಿ ಶ್ರೀಧರ ಭಟ್ ಬಡಕ್ಕೇಕೆರೆ ಸಹಕರಿಸಿದರು.
Subscribe to:
Posts (Atom)