Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

17 October 2012

19ರಂದು ಗ್ರಂಥಾಲಯ ಕಟ್ಟಡ - ಕಾಮಗಾರಿ ಪರಿಶೀಲನಾ ಸಭೆ

ನಮ್ಮ ಪ್ರೌಢಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಧನ ಸಹಾಯದಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡದ ಕಾಮಗಾರಿ ಪರಿಶೀಲನಾ ಸಭೆಯು ೧೯.೧೦.೨೦೧೨ ಶುಕ್ರವಾರ ಮಧ್ಯಾಹ್ನ ೧೨ ಗಂಟೆಗೆ ಜರಗಲಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಚ್.ವಿ.ರಾಮಚಂದ್ರ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿಯವರು  ಪರಿಶೀಲನಾ ವರದಿಯನ್ನು ಮಂಡಿಸುವರು.  ಶಾಲಾ ಹಳೆ ವಿದ್ಯಾರ್ಥಿ ಕುಂಜಾರು ಸುಬ್ರಾಯ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಶುಭ ಹಾರೈಸಲಿದ್ದಾರೆ.

No comments:

Post a Comment