Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

19 October 2012

ಕಾಸರಗೋಡಿನಲ್ಲಿ ಕನ್ನಡ ಉಳಿದಿದೆ: ಪ್ರಕಾಶ್ ಮತ್ತಿಹಳ್ಳಿ


“ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿಯೇ ಕನ್ನಡ ದೂರವಾಗುತ್ತಿದೆ. ಬೆಂಗಳೂರಿನ ಜನಸಂಖ್ಯೆಯ ಕೇವಲ ೨೩ ಶೇಕಡಾ ಜನ ಮಾತ್ರ ಸದ್ಯ ಕನ್ನಡಿಗರಿದ್ದಾರೆ. ಆದರೆ ಕರ್ನಾಟಕದಲ್ಲಿರುವ ಕನ್ನಡಿಗರಿಗಿಂತಲೂ ಸುಲಲಿತವಾಗಿ ಕನ್ನಡ ಮಾತನಾಡುವ ಜನ ಈ ಗಡಿನಾಡಿನಲ್ಲಿದ್ದಾರೆ ಎಂಬುದನ್ನು ತಿಳಿದು ಸಂತಸವಾಗಿದೆ. ಕನ್ನಡದ ಬೆಳವಣಿಗೆಗಾಗಿ ಈ ನಾಡಿನ ಜನತೆಯ ಜೊತೆ ನಾವೂ ಕೈಜೋಡಿಸುತ್ತೇವೆ. ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರಾಯೋಜಿಸುವ ಧನ ಸಹಾಯದಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡದ ಕಾಮಗಾರಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾರ್ಯದರ್ಶಿ ಎಂ.ವಿ. ಮಹಾಲಿಂಗೇಶ್ವರ ಭಟ್, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಸ್ವಾಗತಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಧನ್ಯವಾದ ಸಮರ್ಪಿಸಿದರು. ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment