ದಶಂಬರ ಬಂತೆಂದರೆ ಶಾಲಾ ವಿದ್ಯಾರ್ಥಿಗಳಿಗೆ ಎರಡು ಅಬ್ಬರಗಳು. ಮೊದಲನೆಯದು ಕಲೋತ್ಸವ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗುವ ಕಲೋತ್ಸವ ಸ್ಪರ್ಧೆಗಳು ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ಈ ತಿಂಗಳ ಆರಂಭದಲ್ಲಿ ನಡೆದವು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಸ್ಪರ್ಧೆಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳೂ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಸಂಸ್ಕೃತೋತ್ಸವದ ಪ್ರೌಢಶಾಲಾ ಮತ್ತು ಯುಪಿ ವಿಭಾಗದ ಸ್ಪರ್ಧೆಗಳಲ್ಲಿ ಅತ್ಯಧಿಕ ಅಂಕ ಪಡೆದು ಸಂಸ್ಕೃತೋತ್ಸವದ ಸಮಗ್ರ ಪ್ರಶಸ್ತಿಯನ್ನು ಶಾಲೆಗೆ ತಂದಿದ್ದಾರೆ. ಅವರಿಗೆ ಶುಭಾಶಯಗಳು.
ನಾಳೆಯಿಂದ ಮಧ್ಯಾವಧಿ ಪರೀಕ್ಷೆಗಳು ಆರಂಭ. ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಅವರಿಗೂ ಶುಭಾಶಯಗಳು.
ನಾಳೆಯಿಂದ ಮಧ್ಯಾವಧಿ ಪರೀಕ್ಷೆಗಳು ಆರಂಭ. ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಅವರಿಗೂ ಶುಭಾಶಯಗಳು.
No comments:
Post a Comment