Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

14 February 2013

ಶತಮಾನೋತ್ಸವ ಯಶಸ್ವಿಯಾಗಲಿ: ಪಡಿಯಡ್ಪು ಶಂಕರ ಭಟ್

    “ಪೆರಡಾಲದಲ್ಲಿ ಹುಟ್ಟಿ, ನೀರ್ಚಾಲಿನಲ್ಲಿ ಬೆಳೆದು ಹಳ್ಳಿ ಪ್ರದೇಶವಾದ ಈ ನಾಡಿನಲ್ಲಿ ಸಹಸ್ರಾರು ಮಂದಿಗೆ ವಿದ್ಯಾದಾನ ನೀಡಿ ಪರಮ ಪಾವನವಾದ ಮಹಾಜನ ವಿದ್ಯಾಸಂಸ್ಥೆಗಳು ಪ್ರಸ್ತುತ ಶತಮಾನೋತ್ಸವ ಆಚರಣೆಯ ಹೊಸ್ತಿಲಿನಲ್ಲಿದೆ. ಈ ವರ್ಷದ ಕೊನೆಗೆ ನಡೆಯುವ ಈ ಸಮಾರಂಭವು ಕ್ರಿಯಾತ್ಮಕ ಪರಿಣಾಮಗಳನ್ನು ನೀಡಿ ಯಶಸ್ವಿಯಾಗಲಿ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಅಭಿಪ್ರಾಯಪಟ್ಟರು. ಅವರು 10.02.2013 ಆದಿತ್ಯವಾರ ನೀರ್ಚಾಲಿನಲ್ಲಿ ಜರಗಿದ ನಮ್ಮ ಶಾಲೆಗಳ ಶತಮಾನೋತ್ಸವ ಆಚರಣೆಯ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

    ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಕೆ.ಎನ್.ಕೃಷ್ಣ ಭಟ್, ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಶುಭ ಹಾರೈಸಿದರು. ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಮಂಜುನಾಥ ಮಾನ್ಯ, ನಿವೃತ್ತ ಶಿಕ್ಷಕ ಕುಂಜಾರು ಸುಬ್ರಾಯ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಉಪಸ್ಥಿತರಿದ್ದರು. ಸಮಿತಿಯ ಮುಂದಿನ ಸಭೆಯನ್ನು ಮಾರ್ಚ್ ೩ ರಂದು ಶಾಲಾ ಪರಿಸರದಲ್ಲಿ ನಡೆಸಲಾಗುವುದು.

    ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಚ್. ಶಿವಕುಮಾರ ಕಾರ್ಯಕ್ರಮ ನಿರ್ವಹಿಸಿದರು.

1 comment:

  1. ವಿಷಯ ತಿಳಿದು ಸಂತೋಷವಾಯಿತು.
    ಶುಭ ಹಾರೈಕೆಗಳು.

    ReplyDelete