Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

04 March 2013

ವಿದ್ಯಾಭಿಮಾನಿಗಳು ಕೈಜೋಡಿಸಿದರೆ ಶತಮಾನೋತ್ಸವ ಯಶಸ್ವಿ : ಐ.ವಿ.ಭಟ್

    “ಮಹಾಜನ ವಿದ್ಯಾಸಂಸ್ಥೆಗಳ ಶತಮಾನೋತ್ಸವವು ವಿಜೃಂಭಣೆಯಿಂದ ನಡೆಯಲಿ. ಎಲ್ಲಾ ಸಮಿತಿಗಳೂ ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದಲ್ಲಿ ಕಾರ್ಯಕ್ರಮ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ. ದೂರದ ಊರುಗಳಲ್ಲಿರುವ ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರನ್ನೂ ಈ ಕಾರ್ಯಕ್ರಮದಲ್ಲಿ ಸರ್ವ ರೀತಿಯಲ್ಲಿ ಸೇರಿಸಿಕೊಂಡು ಮುನ್ನಡೆಯಬೇಕಾದುದು ಅಗತ್ಯ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಐ.ವಿ.ಭಟ್ ಅಭಿಪ್ರಾಯಪಟ್ಟರು. ಅವರು ನಿನ್ನೆ ಶಾಲೆಯಲ್ಲಿ ಜರಗಿದ ನಮ್ಮ ವಿದ್ಯಾಸಂಸ್ಥೆಗಳ ಶತಮಾನೋತ್ಸವ ಆಚರಣೆಯ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

    ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಪ್ರಾಸ್ತಾವಿಕ ಭಾಷಣ ಮಾಡಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕರುಣಾಕರ ಅನಂತಪುರ ಶುಭ ಹಾರೈಸಿದರು. ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಮಂಜುನಾಥ ಮಾನ್ಯ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ. ನಟರಾಜ ರಾವ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಉಪಸ್ಥಿತರಿದ್ದರು. ಶತಮನೋತ್ಸವದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ಈ ಸಂದರ್ಭದಲ್ಲಿ ರೂಪೀಕರಿಸಲಾಯಿತು.


    ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ವಂದಿಸಿದರು. ನಿವೃತ್ತ ಚಿತ್ರಕಲಾ ಶಿಕ್ಷಕ ಬಾಲ ಮಧುರಕಾನನ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment