“ಸಂಸ್ಕೃತ ವಿದ್ವಾಂಸರಾಗಿ, ಶಾಲೆ ಮತ್ತು ವಿದ್ಯಾರ್ಥಿಗಳ ಉನ್ನತಿಗೆ ಕಾರಣರಾದ ಸಂಸ್ಕೃತ
ಶಿಕ್ಷಕ ಎಸ್.ವಿ.ಭಟ್ ಶಾಲೆಗೆ ಅನುಪಮ ಸೇವೆ ಸಲ್ಲಿಸಿದ್ದಾರೆ. ಶಾಲೆಯ ಕ್ರೀಡಾ
ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಹಿನ್ನೆಲೆಗಳಲ್ಲಿ ದುಡಿದ ಅವರು ಯುವಕರಿಗೆ
ಮಾರ್ಗದರ್ಶಿಯಾಗಿದ್ದಾರೆ. ಶಾಲೆಯ ಶತಮಾನೋತ್ಸವದ ಹೊಸ್ತಿಲಲ್ಲಿ ಅವರ ನಿವೃತ್ತಿ, ಶತಮಾನದ
ಆಚರಣೆಯಲ್ಲಿ ಅವರು ಪೂರ್ಣವಾಗಿ ತೊಡಗಿಸಿಕೊಳ್ಳಲು ಮುನ್ನುಡಿಯಾಗಲಿ” ಎಂದು ನಮ್ಮ ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ
ಸಂಸ್ಕೃತ ಶಿಕ್ಷಕ ಸುಬ್ರಹ್ಮಣ್ಯ ವೆಂಕಟ್ರಮಣ ಭಟ್ (ಎಸ್.ವಿ.ಭಟ್) ಇವರ ಬೀಳ್ಕೊಡುಗೆ
ಸಮಾರಂಭದಲ್ಲಿ ನಿವೃತ್ತರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಎ.ಭುವನೇಶ್ವರಿ, ಸಿ.ಎಚ್.ಸುಬ್ರಹ್ಮಣ್ಯ ಭಟ್, ಎಂ.ಸೂರ್ಯನಾರಾಯಣ, ಎಚ್.ಶಿವಕುಮಾರ, ವಾಣಿ.ಪಿ.ಎಸ್, ಇ.ವೇಣುಗೋಪಾಲಕೃಷ್ಣ, ಶಿವಪ್ರಕಾಶ್.ಎಂ.ಕೆ, ಚಂದ್ರಶೇಖರ ರೈ ಮತ್ತು ಗೋವಿಂದ ಶರ್ಮ.ಕೆ ಇವರು ಶುಭ ಹಾರೈಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕ ಕೆ.ನಾರಾಯಣ ಭಟ್ ವಂದಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಎ.ಭುವನೇಶ್ವರಿ, ಸಿ.ಎಚ್.ಸುಬ್ರಹ್ಮಣ್ಯ ಭಟ್, ಎಂ.ಸೂರ್ಯನಾರಾಯಣ, ಎಚ್.ಶಿವಕುಮಾರ, ವಾಣಿ.ಪಿ.ಎಸ್, ಇ.ವೇಣುಗೋಪಾಲಕೃಷ್ಣ, ಶಿವಪ್ರಕಾಶ್.ಎಂ.ಕೆ, ಚಂದ್ರಶೇಖರ ರೈ ಮತ್ತು ಗೋವಿಂದ ಶರ್ಮ.ಕೆ ಇವರು ಶುಭ ಹಾರೈಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕ ಕೆ.ನಾರಾಯಣ ಭಟ್ ವಂದಿಸಿದರು.
No comments:
Post a Comment