“ಓದು ಭವಿಷ್ಯದ ಹಾದಿಯನ್ನು ರೂಪಿಸುತ್ತದೆ. ಆಕರ್ಷಕ ಗ್ರಂಥಾಲಯಗಳು ಮತ್ತು ಅತ್ಯುತ್ತಮ
ಪುಸ್ತಕಗಳು ಸಮಾಜವನ್ನು ತಮ್ಮತ್ತ ಸೆಳೆಯುತ್ತವೆ. ಈ ಓದುವಿಕೆ ವಿದ್ಯಾರ್ಥಿಗಳಿಗೆ ಅಪಾರ
ಜ್ಞಾನ ಸಂಪತ್ತನ್ನು ಒದಗಿಸುತ್ತದೆ. ಉತ್ತಮ ಪ್ರಜೆಗಳಾಗಿ ಬೆಳೆಯಲು ಓದುವಿಕೆ
ಅನಿವಾರ್ಯ." ಎಂದು ನಮ್ಮ ಶಾಲೆಯ ಪ್ರಭಾರ
ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ವಾಚನಾ ಸಪ್ತಾಹದ
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಶಿಕ್ಷಕರಾದ ಕೆ.ನಾರಾಯಣ ಭಟ್ ಮತ್ತು ಶಿಕ್ಷಕಿ ವಾಣಿ.ಪಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀಶ.ಕೆ ಮತ್ತು ಸ್ವಾಗತ ರೈ ಓದುವಿಕೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿ ಮಂಜೂಷಾ.ಪಿ.ಎಸ್ ಸ್ವಾಗತಿಸಿ ಮಹಿಮಾ. ಎಚ್.ಎನ್ ವಂದಿಸಿದರು. ಅಶ್ವಿನಿ.ಕೆ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರಾದ ಕೆ.ನಾರಾಯಣ ಭಟ್ ಮತ್ತು ಶಿಕ್ಷಕಿ ವಾಣಿ.ಪಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀಶ.ಕೆ ಮತ್ತು ಸ್ವಾಗತ ರೈ ಓದುವಿಕೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿ ಮಂಜೂಷಾ.ಪಿ.ಎಸ್ ಸ್ವಾಗತಿಸಿ ಮಹಿಮಾ. ಎಚ್.ಎನ್ ವಂದಿಸಿದರು. ಅಶ್ವಿನಿ.ಕೆ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment