“ವಾತಾವರಣದಲ್ಲಿ ಅಂಗಾರಾಮ್ಲ ಮತ್ತು ಇತರ ವಿಷಕಾರಿ ಅನಿಲಗಳ, ಮಾಲಿನ್ಯದ ಪ್ರಮಾಣ ಗಣನೀಯವಾಗಿ ಏರುತ್ತಿದೆ. ಇದು ಜೀವಜಾಲದ ಭದ್ರತೆಗೆ ತೊಡಕಾಗಿ ಪರಿಣಮಿಸಿದೆ. ಆಹಾರದ ಉತ್ಪಾದನೆ ಸಸ್ಯಗಳಿಂದ ಮಾತ್ರ ಸಾಧ್ಯ. ಅಂತಹ ಸಸ್ಯಗಳಿಗೆ ಪರಿಸರವು ಮಾರಕವಾಗಿ ಪರಿಣಮಿಸುತ್ತಿರುವುದರಿಂದ ನಾವು ಪರಿಸರ ಸಂರಕ್ಷಣೆಯ ಕಡೆಗೆ ಹೆಚ್ಚಿನ ಗಮನ ನೀಡಬೇಕಾಗಿದೆ. ಜೊತೆಗೆ ದೊರೆತ ಆಹಾರವನ್ನು ಯುಕ್ತಿಯಿಂದ ಉಪಯೋಗಿಸಬೇಕಾಗಿದೆ, ಮುಂದಿನ ತಲೆಮಾರಿನ ಜೀವಿಗಳಿಗಾಗಿ ಪರಿಸರವನ್ನು ಉಳಿಸಬೇಕಾಗಿದೆ" ಎಂದು ನಮ್ಮ ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ವಿಶ್ವಪರಿಸರ ದಿನಾಚರಣೆಯಲ್ಲಿ ಸಾಂಕೇತಿಕವಾಗಿ ಗಿಡ ನೆಟ್ಟು ಮಾತನಾಡುತ್ತಿದ್ದರು.
ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಶೈಲಜಾ. ಬಿ ಉಪಸ್ಥಿತರಿದ್ದರು. ಇಕೋ ಕ್ಲಬ್ ಸಂಚಾಲಕ ಶಿವಪ್ರಕಾಶ್.ಎಂ.ಕೆ ಸ್ವಾಗತಿಸಿ ವಿದ್ಯಾರ್ಥಿ ನಾಯಕ ಶ್ರೀಶ.ಕೆ ವಂದಿಸಿದರು.
ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಶೈಲಜಾ. ಬಿ ಉಪಸ್ಥಿತರಿದ್ದರು. ಇಕೋ ಕ್ಲಬ್ ಸಂಚಾಲಕ ಶಿವಪ್ರಕಾಶ್.ಎಂ.ಕೆ ಸ್ವಾಗತಿಸಿ ವಿದ್ಯಾರ್ಥಿ ನಾಯಕ ಶ್ರೀಶ.ಕೆ ವಂದಿಸಿದರು.
No comments:
Post a Comment