Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

26 July 2013

ಸ್ವಾಗತ ರೈ. ಬಿ - ಕುಂಬಳೆ ಉಪಜಿಲ್ಲಾ ಮಟ್ಟದ ಚೆಸ್ ಚಾಂಪಿಯನ್

ನಮ್ಮ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಸ್ವಾಗತ ರೈ.ಬಿ ಕಳೆದ 20.07.2013 ರಂದು ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯ ಜೂನಿಯರ್ ಹುಡುಗಿಯರ ವಿಭಾಗದಲ್ಲಿ ಚಾಂಪಿಯನ್‍ಶಿಪ್ ಗಳಿಸಿದ್ದಾಳೆ. ಈಕೆ ಶಿಕ್ಷಕ ದಂಪತಿಗಳಾದ ಚಂದ್ರಶೇಖರ ರೈ.ಕೆ ಮತ್ತು ಚಂದ್ರಾವತಿ.ಬಿ ಇವರ ಪುತ್ರಿ. ಶುಭಾಶಯಗಳು...

25 July 2013

ಚೇತನಕೃಷ್ಣ ಸಿ.ವಿ - NMMS ಸ್ಕೋಲರ್‍ಶಿಪ್

ನಮ್ಮ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿ ಚೇತನಕೃಷ್ಣ ಸಿ.ವಿ ಕಳೆದ 2012-13ನೇ ಅಧ್ಯಯನ ವರ್ಷದ ಕೊನೆಗೆ ಜರಗಿದ NMMS (National Means cum Merit Scholarship) ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಸ್ಕೋಲರ್ ಶಿಪ್ ಪಡೆಯಲು ಅರ್ಹತೆ ಪಡೆದಿದ್ದಾನೆ. ಈತ ಸಮೀಪದ ಚೇತನಡ್ಕ ನಿವಾಸಿ ಸಿ.ವೆಂಕಟ್ರಮಣ ಭಟ್ ಮತ್ತು ವಿಜಯಲಕ್ಷ್ಮಿ ಇವರ ಪುತ್ರ. ಶುಭಾಶಯಗಳು...

19 July 2013

ಎಂ. ನಟರಾಜ ರಾವ್ ನಿಧನ - ಸಂತಾಪ

ನಮ್ಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಇಂದು ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪರಮಾತ್ಮನಲ್ಲಿ ಬೇಡಿಕೊಳ್ಳುತ್ತೇವೆ. ಕಂಬನಿಗಳು...

12 July 2013

ರಮ್ಯಾ.ಕೆ ಗೆ ಯು.ಎಸ್.ಎಸ್

ನಮ್ಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ರಮ್ಯಾ.ಕೆ ಕಳೆದ 2012-13ನೇ ಅಧ್ಯಯನ ವರ್ಷದ ಕೊನೆಗೆ ಜರಗಿದ ಯು.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಕೇರಳ ಸರಕಾರ ನೀಡುವ ಸ್ಕೋಲರ್ ಶಿಪ್ ಪಡೆಯಲು ಅರ್ಹತೆ ಪಡೆದಿದ್ದಾಳೆ. ಈಕೆ ಕಿಳಿಂಗಾರು ಸಮೀಪದ ಕೊಡ್ವಕೆರೆ ನಿವಾಸಿ ಕೆ.ಶಿವಕುಮಾರ ಮತ್ತು ಗಂಗಾರತ್ನ ಇವರ ಪುತ್ರಿ.

08 July 2013

ರಕ್ಷಕ ಶಿಕ್ಷಕ ಸಂಘದ ಮಹಾಸಭೆ - 2013

   
   “ನಮ್ಮ ನಾಡಿನ ಅತ್ಯಂತ ಹಳೆಯ ವಿದ್ಯಾಸಂಸ್ಥೆಗಳಲ್ಲಿ ಖ್ಯಾತಿ ಪಡೆದ ಮಹಾಜನ ವಿದ್ಯಾಸಂಸ್ಥೆಗಳ ಶತಮಾನೋತ್ಸವ ಕಾರ್ಯಕ್ರಮಗಳು ಯಶಸ್ವಿಯಾಗಲಿ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೂ ಕೂಡಾ ಚೆನ್ನಾಗಿ ಕಲಿತು ಉತ್ತಮ ಫಲಿತಾಂಶ ಪಡೆದು ಹೆತ್ತವರ, ಸಮಾಜದ ಗೌರವಕ್ಕೆ ಪಾತ್ರರಾಗಲಿ" ಎಂದು ನಮ್ಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷೆ ಅನ್ನಪೂರ್ಣ ಕುಳಮರ್ವ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವರದಿ ವಾಚಿಸಿದರು. ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ ಸ್ವಾಗತಿಸಿ ಕೆ.ನಾರಾಯಣ ಭಟ್ ವಂದಿಸಿದರು.