Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

15 August 2013

ಸ್ವಾತಂತ್ರ್ಯ ಯಾತ್ರೆ 2013

   



  “ಸ್ವಾತಂತ್ರ್ಯ ಸೇನಾನಿಗಳ ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ನೆನಪಿಸಿಕೊಳ್ಳಲು ಸ್ವಾತಂತ್ರ್ಯ ದಿನ ಕಾರ್ಯಕ್ರಮದ ಆಚರಣೆ ನೆರವಾಗುತ್ತದೆ. ಸ್ವಾತಂತ್ರ್ಯದ ಸಂದೇಶವನ್ನು ಉಳಿಸಿ ದೇಶದ ಹಿತಕ್ಕಾಗಿ, ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ನಿಯಂತ್ರಿಸಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಾವು ಶ್ರಮಿಸಬೇಕಾಗಿದೆ" ಎಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಿರಿಯ ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಕೆ.ನಾರಾಯಣ ಭಟ್ ಮತ್ತು ಎಂ.ಸೂರ್ಯನಾರಾಯಣ ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿ, ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಧನ್ಯವಾದ ಸಮರ್ಪಿಸಿದರು. ಚಿತ್ರಕಲಾ ಶಿಕ್ಷಕ ಕೆ.ಗೋವಿಂದ ಶರ್ಮ ಕಾರ್ಯಕ್ರಮ ನಿರೂಪಿಸಿದರು.

    ವಿದ್ಯಾರ್ಥಿಗಳಿಂದ ನೀರ್ಚಾಲಿನಲ್ಲಿ ಸ್ವಾತಂತ್ರ್ಯ ಮೆರವಣಿಗೆ ಮತ್ತು ಸ್ವಾತಂತ್ರ್ಯ ರೂಪಕಗಳು ನಡೆದವು.

No comments:

Post a Comment