Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

21 October 2013

ಶತಮಾನದ ಸಂಭ್ರಮಕ್ಕೆ ತಲೆ ಎತ್ತುತ್ತಿದೆ ಹೊಸ ಕಟ್ಟಡ...

                                   
 ಕನ್ನಡ ಕರಾವಳಿಯ ನಾಡಿಗೆ ಸುಸಂಸ್ಕೃತ ವಿದ್ವಾಂಸ ಪರಂಪರೆಯ ಶ್ರೇಷ್ಟ ಸಾಂಸ್ಕೃತಿಕ
ಸಾಮಾಜಿಕನಾಗರಿಕ ಪರಂಪರೆಯನ್ನೊದಗಿಸಿದ ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಈಗ ಶತಮಾನದ ಸಂಭ್ರಮದಲ್ಲಿದೆ. ಗಡಿನಾಡು ಕಾಸರಗೋಡಿನ ಸಾಂಸ್ಕೃತಿಕ ಹಿನ್ನೆಲೆಗೆ ಬೆನ್ನೆಲುಬಾಗಿರುವ ಈ ವಿದ್ಯಾಸಂಸ್ಥೆ ಸಮಗ್ರ ಕರ್ನಾಟಕದಲ್ಲೇ ಕನ್ನಡತನದ ಪ್ರತಿಷ್ಟಿತ ಶೈಕ್ಷಣಿಕ ಸಂಸ್ಥೆಯಾಗಿ ಕಾಸರಗೋಡಿನ ಹೆಮ್ಮೆಯ ಕೋಡು’ ಆಗಿ ಮೆರೆಯುತ್ತಿದೆ. ಪೆರಡಾಲ ದೇವಸ್ಥಾನದಲ್ಲಿ ಪ್ರಾರಂಭಗೊಂಡು 1913ರಲ್ಲಿ ಅಧಿಕೃತ ನೋಂದಾವಣೆ ಹೊಂದಿ ನೀರ್ಚಾಲಿನಲ್ಲಿ ಸಂಸ್ಕೃತ ಶಾಲೆಯಾಗಿ ಈ ಸಂಸ್ಥೆ ಹೊರಲೋಕಕ್ಕೆ ತೆರೆದುಕೊಂಡಿತು. ಆ ಮೂಲಕ ಕೇವಲ ಒಂದು ವಿದ್ಯಾಸಂಸ್ಥೆಯಾಗದೇ ಸುಸಂಸ್ಕೃತ ಪಂಡಿತ ಪರಂಪರೆಯನ್ನೇ ಸಮಾಜಕ್ಕೆ ಧಾರೆ ಎರೆಯಿತು. ಹೀಗೆ ಸತತ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಅದು ಕುಂಬಳೆ ಸೀಮೆಯ ಸಾಂಸ್ಕೃತಿಕಸಾಮಾಜಿಕ ಇತಿಹಾಸದ ಭಾಗವಾಗಿ ಬೆಳೆದಿದೆ.
                ಪ್ರಸ್ತುತ ಶತಮಾನದ ಸಂಭ್ರಮದಲ್ಲಿ ನೀರ್ಚಾಲು ಶಾಲೆಯ ಪ್ರಾಚೀನ ನಾಲ್ಕಂಕಣದ ಕಟ್ಟಡಗಳನ್ನು ಕೆಡವಿಆಧುನಿಕ ಶೈಕ್ಷಣಿಕ ಪರಿಕಲ್ಪನೆಗೆ ಅನುಸಾರವಾದ ಸುಸಜ್ಜಿತ ಕಟ್ಟಡ ಶೃಂಖಲೆಯನ್ನು ನಿರ್ಮಿಸಿ ಮುಂದಿನ ತಲೆಮಾರಿನ ತನಕ ಸಂಸ್ಥೆಯನ್ನು ಬೆಳೆಸಲು ಉದ್ದೇಶಿಸಲಾಗಿದೆ. ಈ ಯೋಜನೆಯ ಮೊದಲ ಹಂತವಾಗಿ ಸಭಾಂಗಣವನ್ನು ಒಳಗೊಂಡ ಹತ್ತು ತರಗತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಕಟ್ಟಡ ನಿರ್ಮಾಣ ಕಾಮಗಾರಿಯು ಭರದಿಂದ ಸಾಗುತ್ತಿದೆ. ಶತಮಾನೋತ್ಸವದ ಸ್ಮಾರಕವಾಗಿ ನಿರ್ಮಾಣವಾಗುವ ಈ ಕಟ್ಟಡಕ್ಕೆ 2 ಕೋಟಿ ರೂಪಾಯಿಗಳ ವೆಚ್ಚ ಅಂದಾಜಿಸಲಾಗಿದೆ.
                ಇದರಲ್ಲಿ ತರಗತಿ ಕೊಠಡಿಗಳಿಗಾಗಿ ಒಂದು ಕೋಟಿ ರೂಪಾಯಿಸುಸಜ್ಜಿತ ಸಭಾಂಗಣಕ್ಕೆ 50 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜಿಸಲಾಗಿದೆ. ಒಂದು ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಬಹುದಾದ ಈ ಸಭಾಂಗಣವನ್ನು ಅಗತ್ಯ ಸಂದರ್ಭಗಳಲ್ಲಿ ತರಗತಿ ಕೊಠಡಿಯಾಗಿ ಪರಿವರ್ತಿಸಲು ಸೂಕ್ತವಾಗುವಂತೆ ರೂಪಿಸಲಾಗುತ್ತಿದೆ. ನೂತನ ಕಟ್ಟಡಕ್ಕೆ ಪೂರ್ತಿಯಾಗಿ ಸೌರ ವಿದ್ಯುತ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ. ಈ ಕಾರ್ಯಕ್ಕೆಂದೇ 15 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜಿಸಲಾಗಿದೆ. ಈ ಮೂಲಕ ಸಂಪೂರ್ಣ ಸೌರವಿದ್ಯುತ್ ಅಳವಡಿಕೆಯಾಗುವ ಪ್ರಥಮ ಸಂಸ್ಥೆಯಾಗಿ ಈ ವಿದ್ಯಾಲಯವು ಕಾಸರಗೋಡು ಜಿಲ್ಲೆಯಲ್ಲಿ ಪರಿಗಣಿತವಾಗಲಿದೆ. ಇಂಟರ್ ಲಾಕಿಂಗ್ ಮತ್ತು ಹೊರಾಂಗಣ ವಿನ್ಯಾಸಕ್ಕಾಗಿ 10 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜಿಸಲಾಗಿದೆ.
                ದಶಂಬರ ತಿಂಗಳೊಳಗೆ ಈ ಕಾಮಗಾರಿಗಳನ್ನು ಪೂರ್ತಿಗೊಳಿಸುವ ನಿಟ್ಟಿನಲ್ಲಿ ದೇಶ ವಿದೇಶಗಳಲ್ಲಿ ನೆಲೆಸಿರುವ ಹಳೆವಿದ್ಯಾರ್ಥಿಗಳಿಂದ ಮತ್ತು ದಾನಿಗಳಿಂದ ದೇಣಿಗೆಯನ್ನು ಸ್ವೀಕರಿಸಲಾಗುತ್ತಿದೆ. ವಿವಿಧ ಹುದ್ದೆಗಳಲ್ಲಿರುವ ಇಲ್ಲಿನ ಹಳೆ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿದ ಶೈಕ್ಷಣಿಕ ಸಂಸ್ಥೆಗಾಗಿವಿದ್ಯಾರ್ಥಿ ಜೀವನದ ಮಧುರ ಸ್ಮರಣೆಯೊಂದಿಗೆ ಆರ್ಥಿಕ ಸಹಾಯವನ್ನು ಒದಗಿಸಿ ಪ್ರೋತ್ಸಾಹಿಸಬೇಕೆಂದು ಶಾಲಾ ಆಡಳಿತ ಮಂಡಳಿ ವಿನಂತಿಸಿದೆ.
                ಶಾಲೆಯ ಶತಮಾನೋತ್ಸವ ಸಂಬಂಧ ಹೆಚ್ಚಿನ ಮಾಹಿತಿಗಳಿಗಾಗಿ ಶಾಲಾ ಬ್ಲಾಗ್ http://mschsnirchal.blogspot.in/ ಮತ್ತು ವೆಬ್‌ಸೈಟ್http://mahajanaschools.com/ ಗಳನ್ನು ಸಂದರ್ಶಿಸಬಹುದು. ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಹಾಯಧನ ನೀಡಲು ಆಸಕ್ತಿ ಹೊಂದಿದ ಮಹಾಜನರು ಕರ್ನಾಟಕ ಬ್ಯಾಂಕಿನ ನೀರ್ಚಾಲು ಶಾಖೆಯ SB ಖಾತೆ ಸಂಖ್ಯೆ 5322500100957501, IFSC: KARB0000532 ಖಾತೆಗೆ ಜಮಾ ಮಾಡಬಹುದಾಗಿದೆ. ಶತಮಾನೋತ್ಸವ ಕಾರ್ಯಕ್ರಮದ ಯಶಸ್ಸಿಗಾಗಿ ಮುಂದಿನ ಹಂತದ ಸಭೆಯನ್ನು ಅಕ್ಟೋಬರ್ 26 ಶನಿವಾರ ಬೆಳಗ್ಗೆ 10 ಗಂಟೆಗೆ ಶಾಲಾ ಪರಿಸರದಲ್ಲಿ ಕರೆಯಲಾಗಿದೆ. ಹಿತೈಷಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ವಿನಂತಿಸಿದ್ದಾರೆ.

No comments:

Post a Comment