“ಅಕ್ಷರ ಜ್ಞಾನ ಮತ್ತು ಭಾಷಾ ಜ್ಞಾನ ನಿರ್ಣಯ ಸಾಮರ್ಥ್ಯ ವಿದ್ಯಾರ್ಥಿಗಳಲ್ಲಿ
ಬೆಳೆಯಬೇಕು. ಭವಿಷ್ಯದ ಕಡೆಗೆ ಉತ್ತಮ ನಡೆಯನ್ನು ಹಾಕಿಕೊಳ್ಳುವುದು ವಿದ್ಯಾರ್ಥಿಗಳಿಗೆ
ಅಗತ್ಯ. ಆದ್ದರಿಂದ ಸಾಕ್ಷರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು
ಎಂದು ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್ ಅಭಿಪ್ರಾಯಪಟ್ಟರು. ಅವರು
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಪಂಚಾಯತು ಮತ್ತು ಡಯಟ್ ಕಾಸರಗೋಡು
ಕೈಗೊಂಡಿರುವ ‘ಸಾಕ್ಷರ’ ಯೋಜನೆಯನ್ನು ಇಂದು ನಮ್ಮ ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಮತ್ತು ಹಿರಿಯ ಅಧ್ಯಾಪಕ ಕೆ.ನಾರಾಯಣ ಭಟ್ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಮೀನಾಕ್ಷಿ ಎಚ್.ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಕರಾದ ಶಿವಕುಮಾರ ಎಚ್. ಸ್ವಾಗತಿಸಿ ಗೋವಿಂದ ಶರ್ಮ ವಂದಿಸಿದರು. ತಲೆಂಗಳ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಮತ್ತು ಹಿರಿಯ ಅಧ್ಯಾಪಕ ಕೆ.ನಾರಾಯಣ ಭಟ್ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಮೀನಾಕ್ಷಿ ಎಚ್.ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಕರಾದ ಶಿವಕುಮಾರ ಎಚ್. ಸ್ವಾಗತಿಸಿ ಗೋವಿಂದ ಶರ್ಮ ವಂದಿಸಿದರು. ತಲೆಂಗಳ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment