
ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯರಾದ ಅವಿನಾಶ್ ರೈ. ವಿ, ಎ.ಎಸ್.ಅಹ್ಮದ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ.ಡಿ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ, ಕಾಸರಗೋಡು ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಎಂ.ಬಲ್ಲಾಳ್, ಕುಂಬಳೆ ಉಪಜಿಲ್ಲಾ ಕ್ರೀಡಾಕೂಟದ ಕಾರ್ಯದರ್ಶಿ ಎಂ.ಸೂರ್ಯನಾರಾಯಣ ಇವರು ಕ್ರೀಡಾಕೂಟಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಲೆಯ ಹಳೆ ವಿದ್ಯಾರ್ಥಿ ಕೆ.ಎನ್.ಕೃಷ್ಣ ಭಟ್ ಇವರನ್ನು ಮಹಾಜನ ವಿದ್ಯಾಸಂಸ್ಥೆಗಳ ಪರವಾಗಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಗೌರವಿಸಿದರು. ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ. ಸಿ.ಎಚ್ ಸ್ವಾಗತಿಸಿದರು. ಕಾರ್ಯಕ್ರಮ ಸಮಿತಿ ಸಂಚಾಲಕ ವಿಶ್ವನಾಥ ಭಟ್ ಧನ್ಯವಾದ ಸಮರ್ಪಿಸಿದರು.
No comments:
Post a Comment