15 August 2016
06 August 2016
06 June 2016
01 June 2016
27 April 2016
11 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+
2015-16ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನಮ್ಮ ಶಾಲೆಯ ಹನ್ನೊಂದು ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಈ ಶಾಲೆಯ ಅಕ್ಷತಾ.ಡಿ, ದೀಪಿಕಾ ಕೆ.ಎಸ್, ದೀರೇಶ್.ಕೆ, ಗೌತಮ್ ಎಂ, ಕೃಷ್ಣ ಕುಮಾರ್.ಕೆ, ನಿಸರ್ಗ.ಕೆ, ರಮ್ಯ.ಕೆ, ಶೃತಿ ಮಯ್ಯ.ಕೆ, ಸ್ಮೃತಿ ಇ.ಪಿ, ಸುಷ್ಮಾ.ಕೆ, ವೆಂಕಟೇಶ ಪ್ರಸಾದ ಸಿ.ಎಚ್ ಈ ಸಾಧನೆಯನ್ನು ಪ್ರದರ್ಶಿಸಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 179 ಮಂದಿ ಪರೀಕ್ಷೆ ಬರೆದಿದ್ದು 178 ಮಂದಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿ ಶಾಲೆಗೆ 99.44% ಫಲಿತಾಂಶವನ್ನು ತಂದಿದ್ದಾರೆ. ವಿಜೇತರಿಗೆ ಶುಭಾಶಯಗಳು...
30 March 2016
``ವಿಮರ್ಶೆ ಇಲ್ಲದೆ ಪ್ರಗತಿ ಇಲ್ಲ: ಕೆ.ವಿ.ತಿರುಮಲೇಶ್"

ವಿದ್ಯಾರ್ಥಿಗಳು ಶಾಲೆಯಲ್ಲಿ ನೀತಿ ಪಾಠಗಳನ್ನು ಕಲಿಯಬೇಕು. ನ್ಯಾಯ ಅನ್ಯಾಯಗಳನ್ನು ಶಾಲೆಯು ಮಗುವಿಗೆ ತಿಳಿಹೇಳುತ್ತದೆ. ಶಾಲೆಗಳಲ್ಲಿ ನೈತಿಕತೆಯನ್ನು ಕಲಿಯುವ ಮೂಲಕ ಮನುಷ್ಯ ನಾಗರಿಕನಾಗುತ್ತಾನೆ. ವಿಜ್ಞಾನ ಮತ್ತು ತತ್ವಜ್ಞಾನಗಳು ವಿರೋಧಾಭಾಸಗಳಲ್ಲ ಎನ್ನುತ್ತಾನೆ ಐನ್ಸ್ಟೀನ್. ಈ ಬಗ್ಗೆ ವಿವಿಧ ಕೃತಿಗಳನ್ನು ಅಧ್ಯಯನ ಮಾಡಿ ‘ಜ್ಞಾನ, ವಿಜ್ಞಾನ ಮತ್ತು ತತ್ವಜ್ಞಾನ ಎಂಬ ಅನುವಾದಿತ ಕೃತಿಗೆ ರೂಪುನೀಡುತ್ತಿದ್ದೇನೆ. ಈ ಕೃತಿಯ ಬರವಣಿಗೆಯ ಹೊತ್ತಿನಲ್ಲಿ ತಾಯ್ನೆಲದ ಅನುಭವ ಶ್ರೀಮಂತಿಕೆ ನನ್ನ ಮೇಲೆ ಪ್ರಭಾವ ಬೀರಿದೆ. ಗುರುಗಳಾದ ಎಸ್.ವಿ.ಎಲ್.ಎನ್ ಶರ್ಮ, ಬೊಳುಂಬು ಸುಬ್ರಾಯ ಭಟ್ಟರು ನನ್ನ ಪ್ರೌಢ ಶಿಕ್ಷಣದ ಹಂತದಲ್ಲಿ ನನ್ನ ಮೇಲೆ ಪ್ರಭಾವ ಬೀರಿದವರಲ್ಲಿ ಪ್ರಮುಖರು. ಅಧ್ಯಾಪಕರು ಶಾಲೆಯ ಆತ್ಮ, ಮನ:ಸಾಕ್ಷಿ ಇದ್ದ ಹಾಗೆ ಇರಬೇಕಾದವರು. ಶಾಲೆಗಳಲ್ಲಿ ಹಿಂಸೆ ನೀಡುವ ಶಿಕ್ಷೆಗಳನ್ನು ನೀಡಬಾರದು. ಶಿಕ್ಷಣಕ್ಕೆ ಸಮೀಪದ ಶಿಕ್ಷೆ ಇರಬೇಕು. ಅಲ್ಲಿ ಸಂವಾದ ಜರಗಬೇಕು, ವಾಗ್ವಾದವಲ್ಲ. ವಿಮರ್ಶೆ ಇಲ್ಲದೆ ಪ್ರಗತಿ ಇಲ್ಲ. ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಗಳಾದ ನಂತರ ಶುಚಿತ್ವದ ಬಗ್ಗೆ ಕಾಳಜಿ ಹೆಚ್ಚಾಗಿದೆ. ನನಗೆ ದೊರೆತ ಈ ಪ್ರಶಸ್ತಿಯ ಮೊತ್ತವೂ ಸಾಮಾಜಿಕ ಕಾರ್ಯಕ್ಕೆ ಬಳಕೆಯಾಗಲಿ. ಎಂದು ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ಅಭಿಪ್ರಾಯಪಟ್ಟರು. ಅವರು ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವಾದ ರೂಪಾಯಿ ಒಂದು ಲಕ್ಷವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನಮ್ಮ ವಿದ್ಯಾಸಂಸ್ಥೆಗೆ ಸಮರ್ಪಿಸಿ ಮಾತನಾಡುತ್ತಿದ್ದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ.ಸುಬ್ರಾಯ ಭಟ್ಟರನ್ನು ಕೆ.ವಿ.ತಿರುಮಲೇಶ್ ಕುಟುಂಬಿಕರು ಗೌರವಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಶೈಲಜ.ಬಿ ಪ್ರಾರ್ಥಿಸಿದರು.
28 March 2016
ಸಾಹಿತಿ ಕೆ.ವಿ.ತಿರುಮಲೇಶ್ ಇವರಿಂದ ಗೌರವ ಸಮರ್ಪಣೆ
ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗೆ ಸಮರ್ಪಿಸಲಿದ್ದಾರೆ. 30.03.2016 ಬುಧವಾರ ಅಪರಾಹ್ನ 4 ಗಂಟೆಗೆ ನಮ್ಮ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಪಡಿಯಡ್ಪು ಶಂಕರ ಭಟ್ಟರು ಕೆ.ವಿ.ತಿರುಮಲೇಶರನ್ನು ಅಭಿನಂದಿಸಲಿದ್ದಾರೆ. ಶಾಲಾ ಹಳೆ ವಿದ್ಯಾರ್ಥಿ, ಚಿತ್ರ ಕಲಾವಿದ ಪಿ.ಎಸ್.ಪುಣಿಂಚಿತ್ತಾಯ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಶುಭ ಹಾರೈಸಲಿದ್ದಾರೆ.
03 February 2016
“ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ” : ಮೈರ್ಕಳ ನಾರಾಯಣ ಭಟ್
“ತಲೆಮಾರುಗಳ ಹಿಂದಿನಿಂದಲೇ ಗುಣಮಟ್ಟದ ಶಿಕ್ಷಣವನ್ನು ನೀಡಿ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಹಾಜನ ಸಂಸ್ಥೆ ಮತ್ತೊಂದು ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಸಂಸ್ಕೃತ ಮಹಾವಿದ್ಯಾಲಯವಾಗಿದ್ದ ಈ ಸಂಸ್ಥೆಯಲ್ಲಿ ಸುಸಜ್ಜಿತ ಗ್ರಂಥಾಲಯವಿದ್ದು ಇದರ ಉಪಯೋಗವನ್ನು ಅನೇಕ ಮಂದಿ ಪಡೆದುಕೊಳ್ಳುತ್ತಿದ್ದಾರೆ. ಚಟುವಟಿಕೆ ಆಧಾರಿತ ಕಲಿಕೆಯು ಪ್ರಸಕ್ತ ಕಾಲಘಟ್ಟದ ಅಗತ್ಯವಾಗಿರುವುದರಿಂದ ಈ ಸಂಸ್ಥೆಯಲ್ಲಿ ಅಂತಹ ಚಟುವಟಿಕೆಗಳಿಗೂ ವಿಶಾಲ ಅವಕಾಶಗಳು ದೊರೆಯುತ್ತಿರುವುದು ಸಂತಸದ ವಿಚಾರ” ಎಂದು ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ನಿವೃತ್ತ ಪ್ರಾಂಶುಪಾಲ ಮೈರ್ಕಳ ನಾರಾಯಣ ಭಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ವರ್ಧಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಜಯಾ.ಎಸ್ ಭಟ್ ಶುಭಹಾರೈಸಿದರು.
ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ.ಸಿ.ಎಚ್ ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀದೇವಿ.ಕೆ ಕಾರ್ಯಕ್ರಮವನ್ನು ನಿರೂಪಿಸಿದರು.
01 February 2016
30 January 2016
ಫೆಬ್ರವರಿ 3 ರಂದು ಶಾಲಾ ವಾರ್ಷಿಕೋತ್ಸವ, ಬನ್ನಿ
ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕೋತ್ಸವವು 03.02.2016ನೇ ಬುಧವಾರ ಜರಗಲಿದೆ. ಅಪರಾಹ್ನ 2.00 ಗಂಟೆಗೆ ಜರಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಡಾಲದ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ನಿವೃತ್ತ ಪ್ರಾಂಶುಪಾಲ ಮೈರ್ಕಳ ನಾರಾಯಣ ಭಟ್ ನಿರ್ವಹಿಸಲಿದ್ದಾರೆ. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಅಪ್ಪಣ್ಣ ಸೀತಾಂಗೋಳಿ ಮತ್ತು ಚಂದ್ರಹಾಸ ರೈ ಶುಭಾಶಂಸನೆಗೈಯುವರು. ತಾವೆಲ್ಲರೂ ಬರಬೇಕಾಗಿ ಅಪೇಕ್ಷೆ.
22 January 2016
Subscribe to:
Posts (Atom)