ನಮ್ಮ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಇಂದು 15.08.2016 ಸೋಮವಾರ ನೀರ್ಚಾಲಿನಲ್ಲಿ ಸ್ವಾತಂತ್ರ್ಯೋತ್ಸವ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯ ರೂಪಕವನ್ನು ಪ್ರದರ್ಶಿಸಿದರು.
ಬೇಳ ಸುಬ್ರಹ್ಮಣ್ಯ ಅಡಿಗರ ಭತ್ತದ ಗದ್ದೆಯನ್ನು ನಮ್ಮ ಶಾಲಾ ವಿದ್ಯಾರ್ಥಿಗಳು ನಿನ್ನೆ ಸಂದರ್ಶಿಸಿ ಭತ್ತದ ಬೆಳೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಶಾಲಾ ಅಧ್ಯಾಪಕರಾದ ಗೋವಿಂದ ಶರ್ಮ ಕೋರಿಕ್ಕಾರು, ಕೃಷ್ಣಪ್ರಸಾದ್ ಬಣ್ಪುತ್ತಡ್ಕ, ಅವಿನಾಶ ಕಾರಂತ ಪಾಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.