“ಶಾಲಾ ದಿನಗಳಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸ ಅಗತ್ಯ. ಶಾಲೆಯಲ್ಲಿರುವ ವಿವಿಧ ಸಂಘಗಳು ಇದಕ್ಕೆ ಪೂರಕ ವಾತಾವರಣವನ್ನು ನಿರ್ಮಿಸುತ್ತವೆ. ವಿದ್ಯಾರ್ಥಿಗಳು ಇಂತಹ ಸಂಘಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳಬೇಕು.” ಎಂದು ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಚ್ ವೆಂಕಟರಾಜ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಹಿರಿಯ ಶಿಕ್ಷಕ ಸೂರ್ಯನಾರಾಯಣ.ಎಚ್ ಅಧ್ಯಕ್ಷತೆ ವಹಿಸಿದರು. ಶಿಕ್ಷಕಿ ಸರಸ್ವತಿ.ಸಿ.ಎಚ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವಿದ್ಯಾರ್ಥಿನಿ ಶರ್ವಾಣಿ.ಕೆ ಸ್ವಾಗತಿಸಿ ಕಾರ್ತಿಕ್ ಕೃಷ್ಣ.ಕೆ ವಂದಿಸಿದರು. ಅದಿತಿ.ಕೆ ಮತ್ತು ಮುರಳೀಮಾಧವ.ಸಿ ಕಾರ್ಯಕ್ರಮ ನಿರೂಪಿಸಿದರು.