Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

26 August 2017

“ನೀರ್ಚಾಲಿನಲ್ಲಿ ಕುಂಬಳೆ ಉಪಜಿಲ್ಲಾ ಕಲೋತ್ಸವ ಯಶಸ್ವಿಯಾಗಲಿ'': ಕೆ.ಎನ್.ಕೃಷ್ಣ ಭಟ್


“ಶಾಲಾ ಕಲೋತ್ಸವವು ವಿವಿಧ ಪ್ರತಿಭೆಗಳನ್ನು ಪ್ರದರ್ಶಿಸಲು ವಿದ್ಯಾರ್ಥಿಗಳಿಗೆ ದೊರೆಯುವ ಸುವರ್ಣಾವಕಾಶ. ಈ ಬಾರಿ ಕುಂಬಳೆ ಉಪಜಿಲ್ಲಾ ಮಟ್ಟದ ಕಲೋತ್ಸವವನ್ನು ಆಯೋಜಿಸುವ ಜವಾಬ್ದಾರಿ ನೀರ್ಚಾಲಿಗೆ ದೊರೆತಿದೆ. ಮಹಾಜನರು ನಡೆದಾಡಿದ ಈ ನೆಲದಲ್ಲಿ ಕುಂಬಳೆ ಉಪಜಿಲ್ಲೆಯ ನೂರಕ್ಕೂ ಮಿಕ್ಕಿ ಶಾಲೆಗಳಿಂದ ಮೂರು ಸಾವಿರಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮವು ಯಶಸ್ವಿಯಾಗಲಿ'' ಎಂದು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಸಂಘಟಕ ಸಮಿತಿ ರೂಪೀಕರಣ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ.ಡಿ ಅಧ್ಯಕ್ಷತೆ ವಹಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ್ ಮಾನ್ಯ, ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯ ಅವಿನಾಶ್ ರೈ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ, ಪುತ್ತಿಗೆ ಗ್ರಾಮ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಪ್ರೇಮಕುಮಾರಿ, ದೇಲಂಪಾಡಿ ಗ್ರಾಮ ಪಂಚಾಯತು ಸದಸ್ಯ ಗಂಗಾಧರ, ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್.ಎಂ. ಶುಭ ಹಾರೈಸಿದರು.

ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂರ್ತಿ.ಕೆ ಪ್ರಾಸ್ತಾವಿಕ ಭಾಷಣ ಮಾಡಿದರು. ಮುಖ್ಯೋಪಾಧ್ಯಾಯರ ಸಂಘದ ಸಂಚಾಲಕ ವಿಷ್ಣುಪಾಲನ್ ವಿವಿಧ ಸಮಿತಿಗಳ ಕುರಿತು ಮಾಹಿತಿ ನೀಡಿದರು. 2017 ಅಕ್ಟೋಬರ್ 31 ರಿಂದ ನವೆಂಬರ್ 4 ರ ತನಕ ಜರಗುವ ಈ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರೂಪೀಕರಿಸಿ ರೂಪಾಯಿ ಹದಿಮೂರು ಲಕ್ಷದ ಇಪ್ಪತ್ತು ಸಾವಿರದ ಬಜೆಟ್ ಅಂಗೀಕರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಸ್ವಾಗತಿಸಿದರು, ಹಿರಿಯ ಶಿಕ್ಷಕಿ ವಾಣಿ.ಪಿ.ಎಸ್ ವಂದಿಸಿದರು. ಶಿಕ್ಷಕ ಶಿವಪ್ರಕಾಶ್.ಎಂ.ಕೆ ಕಾರ್ಯಕ್ರಮ ನಿರೂಪಿಸಿದರು.

17 August 2017

ಕಲೋತ್ಸವ ಸಂಘಟನಾ ಸಮಿತಿ ರೂಪೀಕರಣ ಸಭೆ

ಈ ಅಧ್ಯಯನ ವರ್ಷದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವವನ್ನು ನಮ್ಮ ಶಾಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ನಿಟ್ಟಿನಲ್ಲಿ ಸಂಘಟನಾ ಸಮಿತಿ ರೂಪೀಕರಣ ಸಭೆಯನ್ನು ಅಗೋಸ್ತು 23 ರಂದು ಅಪರಾಹ್ನ 3.15ಕ್ಕೆ ಕರೆಯಲಾಗಿದೆ. ಕುಂಬಳೆ ಉಪಜಿಲ್ಲೆಯ ವ್ಯಾಪ್ತಿಗೊಳಪಡುವ ಕೇರಳ ಸರಕಾರದ ಎಲ್ಲ ಅಂಗೀಕೃತ ಶಾಲೆಗಳ ಅಧಿಕೃತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆಗಳನ್ನು ನೀಡಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಅಪೇಕ್ಷೆ.

15 August 2017

ಸ್ವಾತಂತ್ರ್ಯ ದಿನಾಚರಣೆ


ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ನಮ್ಮ ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ನೀರ್ಚಾಲು ಪೇಟೆಯಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಮಾತನಾಡಿದರು.

ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯ ಕಂಬಾರು, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಸ್ವಾಗತಿಸಿದರು.  ಶಾಲಾ ಹಿರಿಯ ಶಿಕ್ಷಕಿ ಕೆ.ವಿನೋದಿನಿ ವಂದಿಸಿದರು. ಸಂಚಾಲಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.

09 August 2017

ಹಿರೋಷಿಮಾ ಮತ್ತು ನಾಗಸಾಕಿ ದಿನಾಚಾರಣೆ

ಯು.ಪಿ.ಸಮಾಜ ವಿಜ್ಞಾನ ಕ್ಲಬ್ ನ ಆಶ್ರಯದಲ್ಲಿ ಇಂದು ನಮ್ಮ ಶಾಲೆಯಲ್ಲಿ ಹಿರೋಷಿಮಾ ಮತ್ತು ನಾಗಸಾಕಿ ದಿನಾಚಾರಣೆ ಜರಗಿತು. ಈ ಸಂದರ್ಭದಲ್ಲಿ ಅಣು ಬಾಂಬ್ ದಾಳಿ, ಪರಿಣಾಮಕ್ಕೆ ಸಂಬಂಧಿಸಿದ ವೀಡಿಯೋ ಪ್ರದರ್ಶನವೂ ನಡೆಯಿತು. ಯುದ್ಧ ವಿರೋಧಿ ಪೋಸ್ಟರ್ ರಚನೆಯು ಮಕ್ಕಳಿಗೆ ಯುದ್ಢದ ಭೀಕರತೆಯನ್ನು ಮನವರಿಕೆ ಮಾಡಿಕೊಟ್ಟಿತು. ಹೈಸ್ಕೂಲು ವಿಭಾಗದ ಸಮಾಜ ವಿಜ್ಞಾನ ಅಧ್ಯಾಪಕ ಶಿವಪ್ರಕಾಶ ಯಂ.ಕೆ ಹಿರೋಷಿಮಾ,ನಾಗಸಾಕಿ ದುರಂತದ ದುಷ್ಪರಿಣಾಮದ ಕುರಿತು ಭಾಷಣ ಮಾಡಿದರು. ಪ್ಲಾಸಿ ಮತ್ತು ಬಾಕ್ಸರ್ ಕದನದ ಬಗ್ಗೆ ಕಿರು ನಾಟಕವನ್ನು 7 ಎ ತರಗತಿಯ ಹುಡುಗರು ಪ್ರದರ್ಶಿಸಿದರು. ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ ಸಿ.ಎಚ್ ಅಧ್ಯಕ್ಷತೆ ವಹಿಸಿದರು. ‘ಯುದ್ಧ ಯಾಕೆ ಬೇಡ?’ ಎಂಬ ವಿಷಯದ ಬಗ್ಗೆ 7 ಎ ತರಗತಿಯ ಕಾರ್ತಿಕ್.ಕೆ.ಎಸ್. ಭಾಷಣ ಮಾಡಿದನು. ದೀಕ್ಷಿತ್ ಸ್ವಾಗತಿಸಿ ಕೃಪಾನಿಧಿ ವಂದಿಸಿದರು. ಗಣೇಶ ಕಾರ್ಯಕ್ರಮ ನಿರೂಪಿಸಿದರು.

02 August 2017

CPCRI ಗೆ ಭೇಟಿ



ನಮ್ಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಗಳು ಇಂದು ಸಿ.ಪಿ.ಸಿ.ಆರ್.ಐ ಕಾಸರಗೋಡನ್ನು ಸಂದರ್ಶಿಸಿದರು. ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿ ಮಣಿಕಂಠನ್ ವಿದ್ಯಾರ್ಥಿಗಳಿಗೆ ಕಸಿ ಕಟ್ಟುವ ಕುರಿತು ಮತ್ತು ಮುರಳಿಕೃಷ್ಣ ಕಿಳಿಂಗಾರು ಟಿಶ್ಯೂ ಕಲ್ಚರ್ ಕುರಿತಾದ ಪ್ರಾತ್ಯಕ್ಷಿಕೆ ನೀಡಿದರು. ಶಾಲಾ ಶಿಕ್ಷಕರಾದ ಕೃಷ್ಣಪ್ರಸಾದ.ಟಿ, ಅವಿನಾಶ ಕಾರಂತ.ಎಂ ಮತ್ತು ಪೂರ್ಣಿಮಾ ನೇತೃತ್ವ ನೀಡಿದರು.