
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಅಧ್ಯಕ್ಷತೆ ವಹಿಸಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಕಾರ್ಯಕ್ರಮ ಸಮಿತಿಯ ಉಪಾಧ್ಯಕ್ಷ ಬಾಲಚಂದ್ರ, ಲಾಂಛನವನ್ನು ರೂಪಿಸಿದ ವೇಣುಗೋಪಾಲ ಆರೋಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ. ಸಿ.ಎಚ್ ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ ರೈ ವಂದಿಸಿದರು. ಶಿಕ್ಷಕಿ ಶೈಲಜ.ಬಿ ಪ್ರಾರ್ಥಿಸಿದರು. ಕಾರ್ಯಕ್ರಮ ಸಮಿತಿ ಸಂಚಾಲಕ ಶಿವಪ್ರಕಾಶ್.ಎಂ.ಕೆ ಕಾರ್ಯಕ್ರಮ ನಿರೂಪಿಸಿದರು.