04 December 2017
ಕೃಷ್ಣ ಶೌರಿ ಡಿ.ಎಸ್
ಚೆಮ್ನಾಡಿನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ಕೊಳಲು ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಕೃಷ್ಣ ಶೌರಿ ಡಿ.ಎಸ್ ಎ ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾನೆ. ಈತ ಎಡನಾಡು ಗ್ರಾಮದ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಆಶಾ ಶಾರದಾ ಇವರ ಪುತ್ರ. ಕಾಸರಗೋಡಿನ ಮನಮೋಹನ ಆಚಾರ್ಯ ಕೆರೆಮನೆ ಇವರ ಶಿಷ್ಯ. ಶುಭಾಶಯಗಳು...
ವರಲಕ್ಷ್ಮಿ. ಎನ್
ಚೆಮ್ನಾಡಿನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ಸಂಸ್ಕೃತ ಕವಿತಾರಚನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ವರಲಕ್ಷ್ಮಿ. ಎನ್. 'ಎ' ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಈಕೆ ಶಂಕರಪ್ರಸಾದ ನಾಯ್ಕಾಪು ಮತ್ತು ಪದ್ಮಿನಿ ಇವರ ಪುತ್ರಿ. ಶುಭಾಶಯಗಳು...
Subscribe to:
Posts (Atom)