Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

25 June 2018

ಬಳ್ಳಪದವು ಶಂಕರನಾರಾಯಣ ಭಟ್ಟರಿಂದ ಕೊಡುಗೆ


ಶಾಲೆಯ ಪೂರ್ವ ವಿದ್ಯಾರ್ಥಿ, ಸಂಸ್ಕೃತ ವಿದ್ವಾಂಸ ವೇದಮೂರ್ತಿ ಬಳ್ಳಪದವು ಶಂಕರನಾರಾಯಣ ಭಟ್ಟರಿಗೆ ನಮ್ಮ ಸಂಸ್ಥೆಯ ಮೇಲೆ ಅಪಾರ ಪ್ರೀತಿ, ಇಳಿವಯಸ್ಸಿನಲ್ಲಿಯೂ ಶಾಲೆಯ ಮೇಲಿನ ಅಭಿಮಾನದಿಂದ ಮಧ್ಯಾಹ್ನ ಭೋಜನ ವ್ಯವಸ್ಥೆಗೆ ಅನುಕೂಲವಾಗುವಂತೆ ಹೊಸ ಪಾತ್ರೆ ಮತ್ತು ಪರಿಕರಗಳನ್ನು ತೆಗೆದಿಟ್ಟು ನಮ್ಮನ್ನು ಕರೆದಿದ್ದಾರೆ, ಇಂದು ನಮ್ಮ ಶಾಲೆಯ ಮುಖ್ಯೋಪಾಧ್ಯಾಯರಾದ ಸಿ.ಎಚ್ ವೆಂಕಟರಾಜರು ಅವುಗಳನ್ನು ಸ್ವೀಕರಿಸಿದರು. ಜೊತೆಯಲ್ಲಿ ಅಧ್ಯಾಪಕರಾದ ಬಿ.ಸುಬ್ರಹ್ಮಣ್ಯ, ಶಿಕ್ಷಕಿ ವಾಣಿ.ಪಿ.ಎಸ್ ಮತ್ತು ಶೈಲಜಾ.ಬಿ ಉಪಸ್ಥಿತರಿದ್ದರು. ಬಳ್ಳಪದವು ಶಂಕರನಾರಾಯಣ ಭಟ್ಟರಿಗೂ ಅವರ ಧರ್ಮಪತ್ನಿಯವರಿಗೂ ಧನ್ಯವಾದಗಳು...

21 June 2018

ಯೋಗ ದಿನಾಚರಣೆ

ಪತಂಜಲಿ ಯೋಗ ವಿದ್ಯಾಪೀಠದ ಆಶ್ರಯದಲ್ಲಿ ಕಳೆದ ಹದಿನೈದು ದಿನಗಳಿಂದ ನಮ್ಮ ಶಾಲೆಯಲ್ಲಿ ಯೋಗ ತರಬೇತಿ ಜರಗುತ್ತಿದ್ದು ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಳಗ್ಗೆ ಸಭಾ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿತ್ತು. ಕಾಸರಗೋಡು ಜಿಲ್ಲಾಧಿಕಾರಿಗಳಾದ ಕೆ.ಜೀವನ್ ಬಾಬು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರಗಿತು.


05 June 2018

ವಿಶ್ವ ಪರಿಸರ ದಿನಾಚರಣೆ


ಇಂದು ನಮ್ಮ ಶಾಲೆಯಲ್ಲಿ ಜರಗಿದ ವಿಶ್ವಪರಿಸರ ದಿನಾಚರಣೆಯಲ್ಲಿ ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಗ್ರಾಮ ಪಂಚಾಯತು ಮಟ್ಟದ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಪರಿಸರದಲ್ಲಿ ಗಿಡವನ್ನು ನೆಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿನ ಸದಸ್ಯರು, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಉಪಸ್ಥಿತರಿದ್ದರು.

ಸಾಯಂಕಾಲ ಜರಗಿದ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಹಿರಿಯ ಶಿಕ್ಷಕಿ ವಿನೋದಿನಿ.ಕೆ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿದರು. ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಶಾಲಾ ಶಿಕ್ಷಕಿ ಶೈಲಜಾ.ಬಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಪ್ರೌಢಶಾಲಾ ವಿಭಾಗದ ಶಿಕ್ಷಕ ಕೃಷ್ಣಪ್ರಸಾದ.ಟಿ ಕಾರ್ಯಕ್ರಮ ನಿರೂಪಿಸಿದರು

01 June 2018

ಶಾಲಾ ಪ್ರವೇಶೋತ್ಸವ



ಹೊಸ ಕನಸುಗಳನ್ನು ಕಟ್ಟಿಕೊಂಡು ವಿದ್ಯಾರ್ಥಿಗಳು ಶಾಲೆಯ ಮೆಟ್ಟಿಲನ್ನು ಏರುತ್ತಿದ್ದಾರೆ, ನಿನ್ನೆಯೇ ನಾವು ವಿದ್ಯಾರ್ಥಿಗಳನ್ನು ಸ್ವಾಗತಿಸುವುದಕ್ಕಾಗಿ ನಮ್ಮ ಶಾಲೆಯನ್ನು ಸಿಂಗರಿಸಿದ್ದೇವೆ. ಹೊಸದಾಗಿ ಸೇರಿದ ವಿದ್ಯಾರ್ಥಿಗಳ ಮೆರವಣಿಗೆಯೊಂದಿಗೆ ನಮ್ಮ ಶಾಲೆಯಲ್ಲಿ ಪ್ರವೇಶೋತ್ಸವವು ಇಂದು ಜರಗಿತು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ರಕ್ಷಕ ಶಿಕ್ಷಕ ಸಂಘದ ಎಸ್.ನಾರಾಯಣ ಮತ್ತು ಇತರ ಸದಸ್ಯರು ಅಧ್ಯಾಪಕರೊಂದಿಗೆ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದರು. ನೂತನ ಶೈಕ್ಷಣಿಕ ವರ್ಷಕ್ಕೆ ಮಹಾಜನದ ಶುಭಾಶಯಗಳು...