ನಮ್ಮ ಶಾಲೆಗೆ ಹೊಸತಾಗಿ ಕಾಲಿರಿಸಿದ
ವಿದ್ಯಾರ್ಥಿಗಳು ಪ್ರಾಚೀನ ವಸ್ತುಗಳ ಕಡೆಗೆ
ಗಮನ ನೀಡಿ ಅದನ್ನು ಅಕ್ಕರೆಯಿಂದ
ಶಾಲೆಗೆ ಹೊತ್ತು ತಂದು ತರಗತಿಯಲ್ಲಿ
ಪ್ರದರ್ಶಿಸಿ ಸಂತಸ ಪಟ್ಟರು. ಆಧುನಿಕ
ಉಪಕರಣಗಳ ಉಪಯೋಗವೇ ಅಧಿಕವಾಗಿರುವ ಈ
ಕಾಲದಲ್ಲಿ ಹಳೆಯ ಕಾಲದ ನಾಣ್ಯ, ಅಳತೆ
ಪಾತ್ರೆಗಳು, ದೀಪ, ಮರದ ಪಾದುಕೆ, ಗಿಂಡಿ, ಸ್ಟ್ಯಾಂಪ್, ಮಡಕೆ
ಮುಂತಾದವುಗಳು ಮಕ್ಕಳಲ್ಲಿ ಕುತೂಹಲವನ್ನು ಹೆಚ್ಚಿಸಿದವು. ಶಿಕ್ಷಕಿ
ಜ್ಯೋತಿಲಕ್ಷ್ಮಿ.ಯಸ್ ಇವರ ನೇತೃತ್ವದಲ್ಲಿ
ನಡೆದ ವಸ್ತುಪ್ರದರ್ಶನ ಮಕ್ಕಳಲ್ಲಿ ಬಹಳ ಕಾಲ ನೆನಪಿನಲ್ಲಿ
ಉಳಿಯುವ ಕಾರ್ಯಕ್ರಮವಾಗಿತ್ತು.
27 July 2018
24 July 2018
ಶಾಲಾ ತರಕಾರಿ ತೋಟಕ್ಕೆ ಕೃಷಿಭವನದ ಅಧಿಕಾರಿಗಳಿಂದ ಭೇಟಿ
ನಮ್ಮ ಶಾಲೆಯ ಚಿತ್ರಕಲಾ ಶಿಕ್ಷಕ ಕೋರಿಕ್ಕಾರು ಗೋವಿಂದ ಶರ್ಮರ ನೇತೃತ್ವದಲ್ಲಿ ಇಕೋ ಕ್ಲಬ್ ನ ಸದಸ್ಯರು ನಿರ್ಮಿಸಿರುವ ಶಾಲಾ ತರಕಾರಿ ತೋಟಕ್ಕೆ ಬದಿಯಡ್ಕ ಕೃಷಿಭವನದ ಸಹಾಯಕ ಕೃಷಿ ಅಧಿಕಾರಿಗಳಾದ ಉಣ್ಣಿ ಕೃಷ್ಣನ್ ಮತ್ತು ರಾಧಾಕೃಷ್ಣನ್ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿದರು. ಇಕೋ ಕ್ಲಬ್ ನ ವಿದ್ಯಾರ್ಥಿಗಳಿಗೆ ತರಕಾರಿ ಗಿಡಗಳಿಗೆ ಬಾಧಿಸುವ ರೋಗಗಳ ಬಗ್ಗೆ ಮತ್ತು ಅದನ್ನು ನಿವಾರಿಸುವ ಕುರಿತಾಗಿ ಸೂಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ವಾಣಿ ಪಿ ಯಸ್, ಅವಿನಾಶ ಕಾರಂತ.ಯಂ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟರಾಜ ಸಿ.ಯಚ್ ಸ್ವಾಗತಿಸಿ ಶಿಕ್ಷಕರಾದ ಕೃಷ್ಣಪ್ರಸಾದ.ಟಿ ವಂದಿಸಿದರು.
21 July 2018
20 July 2018
ಚುನಾವಣೆ 2018
ಶಾಲಾ ವಿದ್ಯಾರ್ಥಿ ಮಂಡಳಿಗೆ ನಾಯಕರ ಆಯ್ಕೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ವಿಧಾನದಂತೆಯೇ ಇಂದು ಜರಗಿತು. ಮೂರು ವಿವಿಧ ಕೇಂದ್ರಗಳಲ್ಲಿ ಇರಿಸಲಾದ ಮತಪೆಟ್ಟಿಗೆಗಳಲ್ಲಿ ವಿದ್ಯಾರ್ಥಿಗಳು ಮತ ಚಲಾಯಿಸಿದರು. ಮತದಾನದ ಕೊನೆಗೆ ಮತ ಎಣಿಕೆ ನಡೆದು ಶಾಲಾ ವಿದ್ಯಾರ್ಥಿ ನಾಯಕನಾಗಿ ಕೃಷ್ಣಪ್ರಸಾದ್, ಉಪ ನಾಯಕಿಯಾಗಿ ಅದಿತಿ.ಕೆ ಮತ್ತು ಗಾಯತ್ರಿ ಭಿತ್ತಿ ಪತ್ರಿಕೆಯ ಸಂಚಾಲಕನಾಗಿ ಲಿಖಿತ್ ಇವರನ್ನು ವಿಜಯಿಗಳೆಂದು ಘೋಷಿಸಲಾಯಿತು. ವಿಜೇತರಿಗೆ ಶುಭಾಶಯಗಳು...
18 July 2018
ಏಳನೇ ತರಗತಿ ವಿದ್ಯಾರ್ಥಿಗಳಿಂದ CPCRI ಗೆ ಭೇಟಿ
ವಿದ್ಯಾರ್ಥಿಗಳಲ್ಲಿ ಕೃಷಿ ಆಸಕ್ತಿ ಮತ್ತು ನವೀನ ತಂತ್ರಜ್ಞಾನಗಳನ್ನು ಬಳಸಿ ಕೃಷಿ ವ್ಯವಸ್ಥೆಗಳನ್ನು ಹೆಚ್ಚು ಆಪ್ಯಾಯಮಾನಗೊಳಿಸುವ ನಿಟ್ಟಿನಲ್ಲಿ ಪರಿಚಯಾತ್ಮಕ ಸಂದರ್ಶನ ಚಟುವಟಿಕೆಗಳು ಅಗತ್ಯ ಎನ್ನುವುದನ್ನು ಗಮನದಲ್ಲಿರಿಸಿ ಶಾಲೆಗಳಲ್ಲಿ ಕೃಷಿ ಸಂದರ್ಶನ ಚಟುವಟಿಕೆ ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳು ಇಂದು ಸಿ.ಪಿ.ಸಿ.ಆರ್.ಐ ಕಾಸರಗೋಡನ್ನು ಸಂದರ್ಶಿಸಿದರು.
ಸಿ.ಪಿ.ಸಿ.ಆರ್.ಐ ಯ ಹಿರಿಯ ತಾಂತ್ರಿಕ ಅಧಿಕಾರಿ ಮುರಳೀಕೃಷ್ಣ ಕಿಳಿಂಗಾರು ವಿದ್ಯಾರ್ಥಿಗಳಿಗೆ ಟಿಶ್ಯೂ ಕಲ್ಚರ್ ಕುರಿತು ಮತ್ತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿ ಮಣಿಕಂಠನ್ ಕಸಿಕಟ್ಟುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಟಿಶ್ಯೂ ಕಲ್ಚರ್ ಮತ್ತು ಕಸಿಕಟ್ಟುವಿಕೆಯ ಸೂಕ್ಷ್ಮಗಳನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ತಮ್ಮ ಅರಿವಿನ ವಿಸ್ತಾರವನ್ನು ಹೆಚ್ಚಿಸಿಕೊಂಡರು. ಸಮರ್ಪಕ ಅರಿವಿನೊಂದಿಗೆ ಕೃಷಿ ವಿಭಾಗದ ಗಣನೀಯ ಸಾಧನೆಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈ ಸಂದರ್ಭ ಭರವಸೆಯ ನುಡಿಗಳನ್ನಾಡಿದರು. ಶಾಲಾ ಶಿಕ್ಷಕರಾದ ಗೋವಿಂದ ಶರ್ಮ.ಕೆ, ಜ್ಯೋತಿಲಕ್ಷ್ಮಿ.ಯಸ್, ಅವಿನಾಶ ಕಾರಂತ.ಯಂ, ಶೋಭಾ.ಕೆ.ಹಿರೇಮಠ್ ಮೊದಲಾದವರು ನೇತೃತ್ವ ನೀಡಿದರು.
13 July 2018
ರಸ್ತೆ ಸುರಕ್ಷಾ ತರಬೇತಿ
ನಮ್ಮ ಶಾಲೆಯ ರಸ್ತೆ ಸುರಕ್ಷಾ ಕ್ಲಬ್ ನೇತೃತ್ವದಲ್ಲಿ ಇಂದು ರಸ್ತೆ ಜಾಗೃತಿಯ ಬಗ್ಗೆ ತಿಳುವಳಿಕಾ ತರಬೇತಿ ಜರಗಿತು. ಕಾಸರಗೋಡು ಆರ್.ಟಿ.ಒ ಕಛೇರಿಯ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ವಿಜಯನ್ ವೆಳ್ಳರಿಕುಂಡು ಇಂದು ಆಗಮಿಸಿ ಸ್ಲೈಡ್ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ರಸ್ತೆ ದಾಟುವಾಗ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಅಧ್ಯಕ್ಷತೆ ವಹಿಸಿದರು.
11 July 2018
09 July 2018
06 July 2018
ಬತ್ತದ ಗದ್ದೆಗೆ ಭೇಟಿ
ಯುವ ಜನಾಂಗವು ಕೃಷಿಯ ಕಡೆಗೆ ಗಮನ ಹರಿಸಲು ಅನುಕೂಲವಾಗಲಿ ಎಂಬ ಸದಾಶಯದೊಂದಿಗೆ ಸಾಂಪ್ರದಾಯಿಕವಾಗಿ ಭತ್ತದ ಬೇಸಾಯವನ್ನು ಮಾಡುತ್ತಿರುವ ಬೇಳ ಸುಬ್ರಹ್ಮಣ್ಯ ಅಡಿಗರ ಭತ್ತದ ಗದ್ದೆಯನ್ನು ನಮ್ಮ ಶಾಲೆಯ ವಿದ್ಯಾರ್ಥಿಗಳು ಇಂದು ಸಂದರ್ಶಿಸಿ ಭತ್ತದ ಬೆಳೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಶಾಲಾ ಅಧ್ಯಾಪಕರಾದ ಗೋವಿಂದ ಶರ್ಮ ಕೋರಿಕ್ಕಾರು, ನಂದಕುಮಾರ್, ಅವಿನಾಶ ಕಾರಂತ ಪಾಡಿ, ಶ್ರೀಮತಿ ಮಾಲತಿ, ಶ್ರೀಮತಿ ಜ್ಯೋತಿಲಕ್ಷ್ಮಿ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ರೋಹಿಣಿ ಮತ್ತು ಶಿಕ್ಷಕ ತರಬೇತಿ ಪಡೆಯುತ್ತಿರುವ ಕುಮಾರಿ ಹೇಮಲತಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸ್ಕೌಟ್ ಉದ್ಘಾಟನೆ
ಪ್ರಸಕ್ತ ವರ್ಷದ ಸ್ಕೌಟ್ ಮತ್ತು ಗೈಡ್ ದಳದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇಂದು ಜರಗಿತು. ನಮ್ಮ ಶಾಲೆಯಲ್ಲಿ ಸುದೀರ್ಘ ಕಾಲ ಸ್ಕೌಟ್ ಅಧ್ಯಾಪಕರಾಗಿ ನಿವೃತ್ತಿ ಹೊಂದಿದ ಎಚ್.ಸೂರ್ಯನಾರಾಯಣ ಇವರು ದೀಪ ಪ್ರಜ್ವಾಲನೆ ಮಾಡುವ ಮೂಲಕ ಸ್ಕೌಟ್ ಮತ್ತು ಗೈಡ್ ತರಬೇತಿಗೆ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ.ಸಿ.ಎಚ್. ಅಧ್ಯಕ್ಷತೆ ವಹಿಸಿದರು. ಸ್ಕೌಟ್ ಶಿಕ್ಷಕ ಶಿವರಂಜನ್. ಪಿ, ಗೈಡ್ ಶಿಕ್ಷಕಿಯರಾದ ವಾಣಿ.ಪಿ.ಎಸ್ ಮತ್ತು ಅನ್ನಪೂರ್ಣ.ಎಸ್ ಉಪಸ್ಥಿತರಿದ್ದರು.
05 July 2018
ವಿವಿಧ ಸಂಘಗಳ ಉದ್ಘಾಟನೆ
ನಮ್ಮ ಶಾಲೆಯಲ್ಲಿರುವ ವಿವಿಧ ವಿದ್ಯಾರ್ಥಿ ಸಂಘಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಇಂದು ಮಧ್ಯಾಹ್ನ ಜರಗಿತು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ವಿವಿಧ ಸಂಘಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ವಿವಿಧ ಕ್ಲಬ್ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ವಿಕಾಸಗೊಳಿಸಬೇಕು ಎಂದು ಹೇಳಿದರು. ಶಾಲಾ ಹಿರಿಯ ಶಿಕ್ಷಕಿ ಕೆ.ವಿನೋದಿನಿ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ಉತ್ತೇಶ್ ಕುಮಾರ್.ಟಿ ಸ್ವಾಗತಿಸಿ, ಆಶಾ.ಕೆ ವಂದಿಸಿದರು. ಅದಿತಿ.ಕೆ ಕಾರ್ಯಕ್ರಮವನ್ನು ನಿರೂಪಿಸಿದಳು.
01 July 2018
ಶಾಲೆಯ ಮುಂದೆ ಸುಂದರ ಗಾರ್ಡನ್
ನಮ್ಮ ಶಾಲೆಯ ಮುಂದೆ ಬದಿಯಡ್ಕದಿಂದ ಕುಂಬಳೆಗೆ ಸಾಗುವ ರಸ್ತೆಯ ಬದಿಯಲ್ಲಿಯೇ ಆಕರ್ಷಕ ಗಾರ್ಡನ್ ಸಿದ್ಧವಾಗಿದೆ. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ವಿಶೇಷ ಆಸ್ಥೆ ವಹಿಸಿ ಈ ಹೂದೋಟದ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಒಂದು ಗ್ರಾಮೀಣ ಪ್ರದೇಶದಲ್ಲಿ ಪ್ರಯಾಣಿಕರ ಕಣ್ಮನಗಳನ್ನು ಸೆಳೆಯುತ್ತಿದೆ. ಈ ಹೋದೋಟ ನಿರ್ಮಾಣ ಪ್ರಕ್ರಿಯೆಯಲ್ಲಿ ಕೈಜೋಡಿಸಿದ ಎಲ್ಲರಿಗೂ ಧನ್ಯವಾದಗಳು...
Subscribe to:
Posts (Atom)