Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

15 September 2018

ಹಿಂದಿ ದಿನಾಚರಣೆಯಲ್ಲಿ ಬಹುಮಾನ


ವರಲಕ್ಷ್ಮಿ. ಎನ್
ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ಹಿಂದಿ ದಿನಾಚರಣೆಯ ಅಂಗವಾಗಿ ಜರಗಿದ ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ವರಲಕ್ಷ್ಮಿ. ಎನ್. ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಶಂಕರಪ್ರಸಾದ ನಾಯ್ಕಾಪು ಮತ್ತು ಪದ್ಮಿನಿ ಇವರ ಪುತ್ರಿ.

ಸುದರ್ಶನ. ಕೆ
ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ಹಿಂದಿ ದಿನಾಚರಣೆಯ ಅಂಗವಾಗಿ ಜರಗಿದ ಹಿರಿಯ ಪ್ರಾಥಮಿಕ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಸುದರ್ಶನ.ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಈತ ಕುಂದಕಟ್ಟದ ಗಣೇಶ್ ಮತ್ತು ಸತ್ಯಶ್ರೀ ಇವರ ಪುತ್ರ.

10 September 2018

‘ಮಕ್ಕಳ ಧ್ವನಿ’ಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

ಉಡುಪಿ, ಕಾಸರಗೋಡು ಜಿಲ್ಲೆಯ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಆಶ್ರಯದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಜರಗಿದ 25ನೇ ವರ್ಷದ ‘ಮಕ್ಕಳ ಧ್ವನಿ’ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಂಗವಾಗಿ ಜರಗಿದ ಕಥಾಗೋಷ್ಠಿಯಲ್ಲಿ ಶಾಲಾ ವಿದ್ಯಾರ್ಥಿಗಳಾದ ಅಚಲ.ಪಿ, ಚಿನ್ಮಯಿ ಭಾರದ್ವಾಜ್, ಅನುಪ್ರಿಯ, ಆಶ.ಕೆ ಮತ್ತು ಕವಿಗೋಷ್ಠಿಯಲ್ಲಿ ವೈಷ್ಣವಿ ಕೆ.ಎಸ್. ಹಾಗೂ ವರಲಕ್ಷ್ಮಿ ಎನ್. ಭಾಗವಹಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು.