Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

25 February 2019

‘ಮಹಾಜನ ವಾಣಿ’ ವಾರ್ಷಿಕ ಸಮಾರೋಪ


"ಉತ್ತಮ ವರದಿಗಾರನೊಬ್ಬನಿಗೆ ಭೂತ ಭವಿಷ್ಯ ವರ್ತಮಾನಗಳ ಕಲ್ಪನೆಯಿದ್ದು ವರದಿಗಾರಿಕೆಯಲ್ಲಿ ತನ್ನತನವನ್ನು ಬೆಳೆಸಿಕೊಂಡರೆ ಉಜ್ವಲಭವಿಷ್ಯ ಕಂಡುಕೊಳ್ಳಬಹುದು"ಎಂದು ವಿಜಯವಾಣಿ ಪತ್ರಿಕೆಯ ವರದಿಗಾರ ಪುರುಷೋತ್ತಮ ಭಟ್ ಪುದುಕೋಳಿ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯ ವಿದ್ಯಾರ್ಥಿಗಳಿಂದ ಮಧ್ಯಾಹ್ನದ ಶಾಲಾ ಅವಧಿಯ ಸದುಪಯೋಗಕ್ಕಾಗಿ ಪ್ರಸಾರವಾಗುವ ‘ಮಹಾಜನವಾಣಿ’ ಎಂಬ ರೇಡಿಯೋ ಕಾರ್ಯಕ್ರಮದ ಸಮಾಪನ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಮಾತನಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟರಾಜ ಸಿ. ಯಚ್ ಹಾಗು ಹಿರಿಯ ಅಧ್ಯಾಪಿಕೆಯಾದ ಶ್ರೀಮತಿ  ವಾಣಿ ಪಿ.ಯಸ್ ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳಾದ ಹರ್ಷಿತ ಸ್ವಾಗತಿಸಿ ಕೃಪಾನಿಧಿ.ಕೆ ವಂದಿಸಿದರು. ವಿದ್ಯಾರ್ಥಿನಿಯರಾದ ಅದಿತಿ.ಕೆ ಮತ್ತು ಅನುಪ್ರಿಯ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಭಾಷಾ ಅಧ್ಯಾಪಕರಾದ ವಿಶ್ವನಾಥ ಭಟ್, ನಂದಕುಮಾರ, ಶ್ರೀಮತಿ ಅನ್ನಪೂರ್ಣ, ಶ್ರೀಮತಿ ಶೈಲಜಾ. ಎ, ಶ್ರೀಮತಿ ಗಾಯತ್ರಿ, ಶ್ರೀಮತಿ ಸುನಿತಾ ಮೊದಲಾದವರು ಮಕ್ಕಳನ್ನು ರೇಡಿಯೋ ಕಾರ್ಯಕ್ರಮಗಳಿಗೆ ತರಬೇತುಗೊಳಿಸಿ ಸಹಕರಿಸಿದರು.

22 February 2019

ಸ್ಪಂದನ - 2019


“ಕಷ್ಟಗಳು ನಮ್ಮನ್ನು ಸದಾ ಕಾಡುತ್ತಿರುತ್ತವೆ. ಆದರೆ ನಾವು ಆ ಕಷ್ಟಗಳು ಎದುರಾದಾಗ ಧೃತಿಗೆಡಬಾರದು ಮತ್ತು ಇತರರ ಕಷ್ಟವನ್ನು ಅರಿತು ಅವರಿಗೆ ಸ್ಪಂದಿಸಿ ಸಹಾಯ ಮಾಡಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಕಿರಣ್ ಪ್ರಸಾದ್ ಕೂಡ್ಲು  ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ’ಸ್ಪಂದನ’ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಉದಾರ ದಾನಿಗಳ ಸಹಕಾರದಿಂದ ಅಶಕ್ತ ವಿದ್ಯಾರ್ಥಿಯ ಕುಟುಂಬಕ್ಕೆ ನೀಡಲು ಸಂಗ್ರಹಿಸಿದ ಮೊತ್ತವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಂಬಳೆ ಲೋಕಲ್ ಅಸೋಸಿಯೇಷನ್ ಕಾರ್ಯದರ್ಶಿ ವಿಜಯ ಕುಮಾರ್, ಮಂಜೇಶ್ವರ ಲೋಕಲ್ ಅಸೋಸಿಯೇಷನ್ ಕಾರ್ಯದರ್ಶಿ ಶಿವಪ್ರಸಾದ್, ಕಾಸರಗೋಡು ಬುಲ್‌ಬುಲ್ ಹೆಡ್‌ಕ್ವಾರ್ಟರ್ಸ್ ನಾಯಕಿ ಶ್ರೀಮತಿ ಜ್ಯೋತಿಲಕ್ಷ್ಮಿ, ಮಂಜೇಶ್ವರ ಎಡಿಸಿ ಶ್ರೀಮತಿ ಶ್ರೀಕುಮಾರಿ, ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ, ಶಾಲಾ ಸ್ಕೌಟ್ ಅಧ್ಯಾಪಕರಾದ ಶಿವರಂಜನ್.ಪಿ.ಆರ್, ಅವಿನಾಶ ಕಾರಂತ.ಎಂ, ಗೈಡ್ಸ್ ಶಿಕ್ಷಕಿ ಶ್ರೀಮತಿ ಅನ್ನಪೂರ್ಣ.ಎಸ್  ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಾರ್ತಿಕ ಕೃಷ್ಣ.ಕೆ ಸ್ವಾಗತಿಸಿ, ಅದಿತಿ.ಕೆ ವಂದಿಸಿದರು. ಪ್ರಗತಿ.ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

13 February 2019

ಕಲಿಕೋತ್ಸವ



“ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಹಲವಾರು ಹೊಸ ವಿಚಾರಗಳನ್ನು ಕಲಿತಿರುತ್ತಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಈ ಚಟುವಟಿಕೆಗಳು ಸಹಕಾರಿಯಾಗುತ್ತವೆ. ಭವಿಷ್ಯದಲ್ಲಿ ಸಮಾಜದ ಹಲವು ರಂಗಗಳಲ್ಲಿ ಮಿಂಚಲಿರುವ ಈ ಮಕ್ಕಳಿಗೆ ಶಾಲೆಯಲ್ಲಿ ಜರಗುವ ಹಲವು ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಕಲೆ, ಕ್ರೀಡೆ, ವೃತ್ತಿಶಿಕ್ಷಣ ಇತ್ಯಾದಿ ರಂಗಗಳಲ್ಲಿ ಹೆಚ್ಚಿನ ತರಬೇತಿ ನೀಡುವ ಶಿಕ್ಷಣ ವ್ಯವಸ್ಥೆ ಕೇರಳದಲ್ಲಿ ಇರುವುದರಿಂದ ಮಕ್ಕಳು ಬಹುಮುಖಿಯಾದ ವಿಕಾಸವನ್ನು ಅವರ ಜೀವನದಲ್ಲಿ ಕಂಡುಕೊಳ್ಳುತ್ತಿದ್ದಾರೆ. ಈ ವಿದ್ಯಾರ್ಥಿಗಳ ಕಲಿಕೆಯ ಸಾಧನೆಗಳನ್ನು ಪ್ರದರ್ಶಿಸುವ ವೇದಿಕೆಯಾಗಿ ಕಲಿಕೋತ್ಸವ ಮೂಡಿಬಂದಿದೆ.” ಎಂದು ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ’ಕಲಿಕೋತ್ಸವ’ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ, ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ, ಬಿ.ಆರ್.ಸಿ ಕೋರ್ಡಿನೇಟರ್ ಮಮತಾ.ಪಿ ಶುಭಹಾರೈಸಿದರು. ಅಧ್ಯಾಪಕರಾದ ಮಾಲತಿ.ಪಿ, ಜ್ಯೋತಿಲಕ್ಷ್ಮಿ.ಎಸ್, ಅವಿನಾಶ ಕಾರಂತ.ಎಂ, ಪೂರ್ಣಿಮ.ಟಿ, ರೋಹಿಣಿ.ಎಸ್, ಶೋಭಾ.ಕೆ.ಹಿರೇಮಠ, ನಂದಕುಮಾರ.ಕೆ, ಸಂತೋಷ್.ಪಿ.ಎಚ್. ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕೆ.ಆರ್.ಸ್ವಾತಿ ಸ್ವಾಗತಿಸಿ, ಪ್ರಜಿತ್.ಪಿ.ರೈ ವಂದಿಸಿದರು. ವರದರಾಜ್. ಕೆ.ಆರ್ ಮತ್ತು ಆಕಾಶ್.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ವಿಜ್ಞಾನ, ಕನ್ನಡ, ಇಂಗ್ಲೀಷ್, ಹಿಂದಿ, ಸಂಸ್ಕೃತ, ಗಣಿತ, ಸಮಾಜ, ವೃತ್ತಿ ಪರಿಚಯ ಮತ್ತು ಕಲೆಗೆ ಸಂಬಂಧಿಸಿದ ವಿವಿಧ ಪ್ರಾಯೋಗಿಕ ಚಟುವಟಿಕೆಗಳು ಮತ್ತು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳ ರಕ್ಷಕರು ಕಾರ್ಯಕ್ರಮಕ್ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.