“ನೈತಿಕತೆಯನ್ನು ಬದಿಗಿರಿಸಿ ಮಾದಕ ದ್ರವ್ಯಗಳ ದಾಸರಾಗುವತ್ತ ಯುವ ಸಮೂಹ ಮುಖ
ಮಾಡಿರುವುದು ಸಮಾಜವನ್ನು ನಲುಗಿಸಲು ಆರಂಭಿಸಿದೆ. ಆ ಮೂಲಕ ಸಮಾಜದ ಧನ, ಆರೋಗ್ಯ ಬಲ
ಕುಸಿತಗೊಳ್ಳುತ್ತಿದೆ. ಇದರಿಂದಾಗಿ ದೇಶ ಉನ್ಮತ್ತವಾಗಲು ಆರಂಭಿಸಿದೆ ಹಾಗೂ ಭವಿಷ್ಯದ
ಕುರಿತ ಚಿಂತನೆ ಶೋಚನೀಯವಾಗುತ್ತಿದೆ. ಮಾದಕ ದ್ರವ್ಯಗಳನ್ನು ವಿರೋಧಿಸುವ ಮೂಲಕ
ಸುಸಂಸ್ಕೃತ ಸಮಾಜವನ್ನು ರೂಪಿಸುವತ್ತ ನಾವು ಶ್ರಮಿಸಬೇಕಾಗಿದೆ" ಎಂದು ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ವಿಶ್ವ
ಮಾದಕ ದ್ರವ್ಯ ವಿರುದ್ಧ ದಿನದ ಅಂಗವಾಗಿ ಜರಗಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಮಾತನಾಡುತ್ತಿದ್ದರು.
ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಕೆ.ನಾರಾಯಣ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀಶ.ಕೆ ಮತ್ತು ಸ್ವಾಗತ ರೈ ಓದುವಿಕೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿ ಸೌಮ್ಯ ಸ್ವಾಗತಿಸಿ ಭವ್ಯಲಕ್ಷ್ಮಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಕೆ.ನಾರಾಯಣ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀಶ.ಕೆ ಮತ್ತು ಸ್ವಾಗತ ರೈ ಓದುವಿಕೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿ ಸೌಮ್ಯ ಸ್ವಾಗತಿಸಿ ಭವ್ಯಲಕ್ಷ್ಮಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment