26 June 2014
21 June 2014
ವಿದ್ಯಾರ್ಥಿಗಳಿಗೆ ಕೊಡೆ ಕೊಡುಗೆ
“ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲಕರ ವಾತಾವರಣವನ್ನು ಮತ್ತು
ಆರ್ಥಿಕ ಸಹಾಯವನ್ನು ಒದಗಿಸುವುದು ಪರಿಸರದ ಹಿರಿಯರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ
ಸಾಮಾಜಿಕ ಸಂಸ್ಥೆಗಳಿಗೆ ಬದ್ಧತೆ ಇರಬೇಕು, ಆ ಮೂಲಕ ಕಲಿಕಾ ಸಾಮಾಗ್ರಿಗಳನ್ನು
ವಿದ್ಯಾರ್ಥಿಗಳಿಗೆ ಒದಗಿಸುವತ್ತ ಗಮನ ಹರಿಸಬೇಕು" ಎಂದು ಕೇರಳ ಗ್ರಾಮೀಣ ಬ್ಯಾಂಕ್ ರೀಜನಲ್
ಮೇನೇಜರ್ ದಾಮೋದರ ಅಭಿಪ್ರಾಯಪಟ್ಟರು. ಅವರು ನಿನ್ನೆ ನಮ್ಮ ಶಾಲೆಯ ಐದನೇ ತರಗತಿ ವಿದ್ಯಾರ್ಥಿಗಳಿಗೆ ಕೇರಳ ಗ್ರಾಮೀಣ
ಬ್ಯಾಂಕ್ ಪುತ್ತಿಗೆ ಶಾಖೆ ಮತ್ತು ದಾನಿಗಳಾದ ಉದ್ಯಮಿ ಕೆ.ಎಂ. ಅಬ್ದುಲ್ ರಹಮಾನ್,
ನೀರ್ಚಾಲು ಕರ್ನಾಟಕ ಬ್ಯಾಂಕ್ ಶಾಖಾ ಪ್ರಬಂಧಕ ಶಿವಶಂಕರ, ಪೆರಡಾಲ ಪ್ರಿಂಟಿಂಗ್ ಪ್ರೆಸ್
ಮಾಲಕ ನಾರಾಯಣ ಮಣಿಯಾಣಿ ಮೊಳೆಯಾರು, ಬಿ.ಕೃಷ್ಣ ಟೈಲರ್ ಉಚಿತವಾಗಿ ನೀಡಿದ ಕೊಡೆಗಳನ್ನು
ವಿತರಿಸಿ ಮಾತನಾಡುತಿದ್ದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಕೇರಳ ಗ್ರಾಮೀಣ ಬ್ಯಾಂಕ್ ಪುತ್ತಿಗೆ ಶಾಖಾ ಪ್ರಬಂಧಕ ಚಂದ್ರಶೇಖರನ್ ನಾಯರ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ, ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಪ್ರಸಾದ್ ಹೊಸಮನೆ, ವಿದ್ಯಾ.ಬಿ ಕೋಣಮ್ಮೆ , ಶಾಲಾ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಕೆ.ನಾರಾಯಣ ಭಟ್ ಸ್ವಾಗತಿಸಿ, ಎಂ.ಸೂರ್ಯನಾರಾಯಣ ಧನ್ಯವಾದ ಸಮರ್ಪಿಸಿದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಕೇರಳ ಗ್ರಾಮೀಣ ಬ್ಯಾಂಕ್ ಪುತ್ತಿಗೆ ಶಾಖಾ ಪ್ರಬಂಧಕ ಚಂದ್ರಶೇಖರನ್ ನಾಯರ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ, ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಪ್ರಸಾದ್ ಹೊಸಮನೆ, ವಿದ್ಯಾ.ಬಿ ಕೋಣಮ್ಮೆ , ಶಾಲಾ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಕೆ.ನಾರಾಯಣ ಭಟ್ ಸ್ವಾಗತಿಸಿ, ಎಂ.ಸೂರ್ಯನಾರಾಯಣ ಧನ್ಯವಾದ ಸಮರ್ಪಿಸಿದರು.
19 June 2014
ವಾಚನಾ ಸಪ್ತಾಹ - 2014
“ಓದಬೇಕು, ಓದಿ ಕಲಿಯಬೇಕು, ಆ ಮೂಲಕ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಅಜ್ಞಾನವು
ಅಂಧಕಾರವನ್ನು ಸೂಚಿಸುತ್ತದೆ. ಆದರೆ ಅಕ್ಷರವು ಬೆಂಕಿ, ಜ್ಞಾನವು ಬೆಳಕು. ಜ್ಞಾನವು
ಜಗತ್ತನ್ನು ವ್ಯಾಪಿಸಲಿ. ಬೆಳಕು ಜಗತ್ತನ್ನು ತುಂಬಿ ಶಾಂತಿ, ಸಮೃದ್ಧಿ ನೆಲೆಸಲಿ” ಎಂದು ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ
ಶರ್ಮ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ವಾಚನಾ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ
ವಹಿಸಿ ಮಾತನಾಡುತ್ತಿದ್ದರು.
ಶಿಕ್ಷಕರಾದ ಕೆ.ನಾರಾಯಣ ಭಟ್, ಸಿ.ಎಚ್. ಸುಬ್ರಹ್ಮಣ್ಯ ಭಟ್, ಎಂ.ಸೂರ್ಯನಾರಾಯಣ ಮತ್ತು ಶಿಕ್ಷಕಿ ವಾಣಿ.ಪಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚೇತನಕೃಷ್ಣ.ಸಿ.ವಿ ಮತ್ತು ಸ್ವಾಗತ ರೈ.ಕೆ ಓದುವಿಕೆಯ ಮಹತ್ವದ ಬಗ್ಗೆ ಮಾತನಾಡಿದರು. ವಾಚನ ಸಪ್ತಾಹದ ಅಂಗವಾಗಿ ಜರಗಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಾದ ಕುಮಾರ ಸುಬ್ರಹ್ಮಣ್ಯ.ಎಚ್ ಸ್ವಾಗತಿಸಿ ಅಭಿಲಾಶ ಶರ್ಮಾ.ಎಂ ವಂದಿಸಿದರು. ರಾಮಕಿಶೋರ.ಎಚ್ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರಾದ ಕೆ.ನಾರಾಯಣ ಭಟ್, ಸಿ.ಎಚ್. ಸುಬ್ರಹ್ಮಣ್ಯ ಭಟ್, ಎಂ.ಸೂರ್ಯನಾರಾಯಣ ಮತ್ತು ಶಿಕ್ಷಕಿ ವಾಣಿ.ಪಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚೇತನಕೃಷ್ಣ.ಸಿ.ವಿ ಮತ್ತು ಸ್ವಾಗತ ರೈ.ಕೆ ಓದುವಿಕೆಯ ಮಹತ್ವದ ಬಗ್ಗೆ ಮಾತನಾಡಿದರು. ವಾಚನ ಸಪ್ತಾಹದ ಅಂಗವಾಗಿ ಜರಗಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಾದ ಕುಮಾರ ಸುಬ್ರಹ್ಮಣ್ಯ.ಎಚ್ ಸ್ವಾಗತಿಸಿ ಅಭಿಲಾಶ ಶರ್ಮಾ.ಎಂ ವಂದಿಸಿದರು. ರಾಮಕಿಶೋರ.ಎಚ್ ಕಾರ್ಯಕ್ರಮ ನಿರೂಪಿಸಿದರು.
05 June 2014
02 June 2014
Subscribe to:
Posts (Atom)