“ಪುರಾತನ ಕಾಲದಿಂದಲೇ ಗಣಿತ ಶಾಸ್ತ್ರದ ಕಡೆಗೆ ಭಾರತವು ಅನನ್ಯವಾದ ಕೊಡುಗೆಯನ್ನು ನೀಡಿದೆ. ಈ ನಿಟ್ಟಿನಲ್ಲಿ ಗಣಿತ ಶಾಸ್ತ್ರದ ಕಡೆಗೆ ವಿದ್ಯಾರ್ಥಿಗಳ ಆಸಕ್ತಿಯನ್ನು ಹೆಚ್ಚಿಸಲು ಶಾಲೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಚಟುವಟಿಕೆಗಳು ವಿದ್ಯಾರ್ಥಿಯ ಗಣಿತ ಕೌಶಲವನ್ನು ಹೆಚ್ಚಿಸುತ್ತವೆ” ಎಂದು ಕುಂಬಳೆ ಬಿ.ಆರ್.ಸಿ ಯ ರೋಜಾ ಟೀಚರ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ‘ಗಣಿತೋತ್ಸವ’ದ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಚ್ ವೆಂಕಟರಾಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕುಂಬಳೆ ಬಿ.ಆರ್.ಸಿಯ ಸೀಮಂತಿನಿ ಟೀಚರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಲಾ ಶಿಕ್ಷಕ ತಲೆಂಗಳ ಕೃಷ್ಣಪ್ರಸಾದ ಸ್ವಾಗತಿಸಿದರು. ಶಿಕ್ಷಕ ಅವಿನಾಶ ಕಾರಂತ ಎಂ. ವಂದಿಸಿದರು. ಹಿರಿಯ ಶಿಕ್ಷಕ ಎಚ್.ಶಿವಕುಮಾರ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ವಸ್ತು ಪ್ರದರ್ಶನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
No comments:
Post a Comment